ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬೇಕಾಬಿಟ್ಟಿಯಾಗಿ ಕುಡಿಯುವ ನೀರು ಬಳಕೆ; 112 ಪ್ರಕರಣ ದಾಖಲು, 5.60 ಲಕ್ಷ ರೂ ದಂಡ ವಸೂಲಿ

ಕುಡಿಯುವ ನೀರಿನ ದುರ್ಬಳಕೆಗೆ ಕಡಿವಾಣ ಹಾಕಲು ಹಾಗೂ ಎಲ್ಲ ನಿವಾಸಿಗಳಿಗೆ ಸಮರ್ಪಕವಾಗಿ ಪೂರೈಕೆ ಮಾಡುವಂತೆ ಜಲಮಂಡಳಿ ಫೆ.17ರಂದು ಸುತ್ತೋಲೆ ಹೊರಡಿಸಿತ್ತು.

ಬೆಂಗಳೂರು: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನೀರಿನ ಸಮಸ್ಯೆ ಎದುರಾಗುತ್ತಿದ್ದು, ಕುಡಿಯುವ ನೀರನ್ನು ಬೇಕಾಬಿಟ್ಟಿಯಾಗಿ ಬಳಸುವುದ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಕ್ರಮ ಕೈಗೊಂಡಿದ್ದು, ಕಳೆದ ವಾರದಲ್ಲಿ 112 ಪ್ರಕರಣಗಳನ್ನು ದಾಖಲಿಸಿ, 5.60 ಲಕ್ಷ ರೂ. ದಂಡ ವಸೂಲಿ ಮಾಡುತ್ತಿದೆ.

ಕುಡಿಯುವ ನೀರಿನ ದುರ್ಬಳಕೆಗೆ ಕಡಿವಾಣ ಹಾಕಲು ಹಾಗೂ ಎಲ್ಲ ನಿವಾಸಿಗಳಿಗೆ ಸಮರ್ಪಕವಾಗಿ ಪೂರೈಕೆ ಮಾಡುವಂತೆ ಜಲಮಂಡಳಿ ಫೆ.17ರಂದು ಸುತ್ತೋಲೆ ಹೊರಡಿಸಿತ್ತು. ಅದರಂತೆ ಕುಡಿಯುವ ನೀರಿನ ಅನಾವಶ್ಯಕ ಪೋಲಿನ ವಿರುದ್ಧ ಅಭಿಯಾನವನ್ನು ತೀವ್ರಗೊಳಿಸಿದೆ.

BWSSB ಅಧಿಕಾರಿಗಳು 112 ಪ್ರಕರಣಗಳನ್ನು ಗುರುತಿಸಿ, ದಂಡ ವಿಧಿಸಿದ್ದಾರೆ. ಈ ಪೈಕಿ ದಕ್ಷಿಣ ವಲಯದಲ್ಲಿ ಅತಿ ಹೆಚ್ಚು 33 ಪ್ರಕರಣಗಳು ದಾಖಲಾಗಿದ್ದು, ಪಶ್ಚಿಮ ವಲಯ ಮತ್ತು ಪೂರ್ವ ವಲಯದಲ್ಲಿ ತಲಾ 28 ಪ್ರಕರಣಗಳು ಮತ್ತು ಉತ್ತರ ವಲಯದಲ್ಲಿ 23 ಪ್ರಕರಣಗಳು ದಾಖಲಾಗಿವೆ. ಅಪರಾಧಿಗಳಿಂದ ದಂಡ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ 1964 ರ ಸೆಕ್ಷನ್ 33 ಮತ್ತು 34 ರಡಿ ಚಲನಚಿತ್ರ ಮಂದಿರಗಳು ಮತ್ತು ಮಾಲ್‌ಗಳಲ್ಲಿ ವಾಹನ ಸ್ವಚ್ಛತೆ, ತೋಟಗಾರಿಕೆ, ನಿರ್ಮಾಣ, ಮನರಂಜನೆ, ಅಲಂಕಾರಿಕ ಕಾರಂಜಿಗಳು ಮತ್ತು ಇತರ ಕುಡಿಯದ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳ ಹೊರತಾಗಿಯೂ, ಅನೇಕ ವ್ಯಕ್ತಿಗಳು ಮತ್ತು ಘಟಕಗಳು ನೀರಿನ ಬಿಕ್ಕಟ್ಟನ್ನು ನಿರ್ಲಕ್ಷಿಸಿ ಶುದ್ಧ ನೀರನ್ನು ದುರ್ಬಳಕೆ ಮಾಡುವುದನ್ನು ಮುಂದುವರೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ನೀರು ಅತ್ಯಮೂಲ್ಯ ಸಂಪನ್ಮೂಲವಾಗಿದ್ದು, ಸುಮಾರು 100 ಕಿಲೋಮೀಟರ್ ದೂರದಿಂದ ಬೆಂಗಳೂರಿಗೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಸಾರ್ವಜನಿಕರು ನೀರು ವ್ಯರ್ಥವಾಗುವುದನ್ನು ತಪ್ಪಿಸಬೇಕು ಮತ್ತು ಅಗತ್ಯವಿರುವ ಎಲ್ಲಾ ಪ್ರದೇಶಗಳಿಗೆ ಮತ್ತು ನಿವಾಸಿಗಳಿಗೆ ಸಮಾನವಾಗಿ ನೀರು ಪೂರೈಕೆ ಖಾತ್ರಿಗೆ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು BWSSB ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT