ಹೊಗೇನೆಕಲ್ ಫಾಲ್ಸ್  
ರಾಜ್ಯ

ಹೊಗೇನೆಕಲ್ ಪ್ರವಾಸೋದ್ಯಮ ಉತ್ತೇಜಿಸಲು ಕರ್ನಾಟಕ ಮುಂದು!

ಕಾವೇರಿ ನದಿಯಿಂದ ಸೃಷ್ಟಿಸಲ್ಪಟ್ಟ ಸುಂದರವಾದ ಜಲಪಾತಗಳಿಗೆ ಭೇಟಿ ನೀಡುವ ಕರ್ನಾಟಕದ ಪ್ರವಾಸಿಗರು ತಮಿಳುನಾಡಿನ ಧರ್ಮಪುರಿಗೆ ದೋಣಿ ಸವಾರಿಗಳು, ಚಾರಣ ಮತ್ತು ಜಲ ಕ್ರೀಡೆಗಳನ್ನು ಆನಂದಿಸಲು ಹೋಗುತ್ತಾರೆ.

ಬೆಂಗಳೂರು: ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ನೆರೆಯ ತಮಿಳುನಾಡಿನೊಂದಿಗೆ ಸ್ಪರ್ಧೆಯನ್ನು ಪ್ರೋತ್ಸಾಹಿಸಲು, ರಾಜ್ಯ ಪ್ರವಾಸೋದ್ಯಮ ಇಲಾಖೆಯು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಹೊಗೇನಕಲ್ ಜಲಪಾತದ ಪ್ರವಾಸ ಉತ್ತೇಜಿಸಲು ಮತ್ತು ಅಭಿವೃದ್ಧಿಪಡಿಸಲು ವಿವರವಾದ ವರದಿಯನ್ನು ರೂಪಿಸುತ್ತಿದೆ.

ಕಾವೇರಿ ನದಿಯಿಂದ ಸೃಷ್ಟಿಸಲ್ಪಟ್ಟ ಸುಂದರವಾದ ಜಲಪಾತಗಳಿಗೆ ಭೇಟಿ ನೀಡುವ ಕರ್ನಾಟಕದ ಪ್ರವಾಸಿಗರು ತಮಿಳುನಾಡಿನ ಧರ್ಮಪುರಿಗೆ ದೋಣಿ ಸವಾರಿ, ಚಾರಣ ಮತ್ತು ಜಲ ಕ್ರೀಡೆ ಆನಂದಿಸಲು ಹೋಗುತ್ತಾರೆ. ಕರ್ನಾಟಕದಿಂದ ಪ್ರವೇಶವಿದೆ, ಆದರೆ ಕಾವೇರಿ ವನ್ಯಜೀವಿ ಅಭಯಾರಣ್ಯ ಅರಣ್ಯ ಪ್ರದೇಶದ ಮೂಲಕ ನಿರ್ಬಂಧ ಏರಲಾಗಿದೆ.

"ರಾಜ್ಯದಿಂದ ಈ ಸ್ಥಳಕ್ಕೆ ಜನರ ಸಂಖ್ಯೆ ಹೆಚ್ಚಾಗುವುದನ್ನು ನಾವು ಬಯಸುತ್ತೇವೆ. ಅರಣ್ಯ ಇಲಾಖೆಯನ್ನು ಒಳಗೊಂಡ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಅಡಿಯಲ್ಲಿ ಈ ಸ್ಥಳವನ್ನು ಅಭಿವೃದ್ಧಿಪಡಿಸುತ್ತೇವೆ. ಇದರಿಂದ ತಮಿಳುನಾಡಿನೊಂದಿಗೆ ಆರೋಗ್ಯಕರ ಸ್ಪರ್ಧೆಯನ್ನು ಏರ್ಪಡುವುದಲ್ಲದೆ, ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ" ಎಂದು ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲಾಖೆಯ ಅಧಿಕಾರಿಗಳು ಅನುಮತಿಗಾಗಿ ಸರ್ಕಾರದ ಮುಂದೆ ಇಡಲು 12 ಕೋಟಿ ರೂ. ವೆಚ್ಚದ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸುತ್ತಿದ್ದಾರೆ. ವರದಿಯು ಗಜೆಬೋ, ಪಾರ್ಕಿಂಗ್ ಸೌಲಭ್ಯ, ಮನರಂಜನಾ ಕೇಂದ್ರ, ವಿಶ್ರಾಂತಿ ಕೊಠಡಿಗಳು, ಫುಡ್ ಕೋರ್ಟ್ ಮತ್ತು ಇತರ ಅಗತ್ಯ ಸೌಲಭ್ಯಗಳನ್ನು ನಿರ್ಮಿಸಲಾಗುತ್ತದೆ. ಇದರೊಂದಿಗೆ, ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳಲ್ಲಿನ ಸೌಲಭ್ಯಗಳ ಸುಧಾರಣೆಗೆ ಯೋಜನಾ ವರದಿಯನ್ನು ಸಹ ಸಿದ್ಧಪಡಿಸಲಾಗುತ್ತಿದೆ.

ಅತಿಥಿ ಗೃಹ ಮತ್ತು ಚಾರಣ ಸೌಲಭ್ಯಗಳನ್ನು ಸ್ಥಾಪಿಸುವುದರಿಂದ ಈ ಪ್ರದೇಶದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪ್ರವಾಸಿಗರಿಗೆ ಸಂಪೂರ್ಣ ಪ್ಯಾಕೇಜ್ ನೀಡಬಹುದು. ಬೆಂಗಳೂರು ಮತ್ತು ಮೈಸೂರಿಗೆ ಹತ್ತಿರದಲ್ಲಿರುವುದರಿಂದ ಈ ಸ್ಥಳ ಸೂಕ್ತವಾಗಿದೆ ಎಂದು ಅಧಿಕಾರಿ ಹೇಳಿದರು.

ಹಲವು ಸಂದರ್ಭಗಳಲ್ಲಿ ಪ್ರವಾಸಿಗರು ಶೋಷಣೆಗೊಳಗಾಗುತ್ತಿದ್ದಾರೆ ಮತ್ತು ಹೆಚ್ಚುವರಿ ಹಣವನ್ನು ವಿಧಿಸಲಾಗುತ್ತಿದೆ ಎಂದು ಇಲಾಖೆಗೆ ಅನೇಕ ದೂರುಗಳು ಕೇಳಿ ಬಂದಿವೆ. ಇದನ್ನು ತಮಿಳುನಾಡು ಸರ್ಕಾರ ನಿರ್ವಹಿಸುತ್ತಿದೆ ಎಂದು ಹೇಳಿ ನಾವು ಯಾವಾಗಲೂ ಅವರನ್ನು ಸಮಾಧಾನ ಪಡಿಸಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT