ಮಾಜಿ ಸಂಸದ ಪ್ರತಾಪ್ ಸಿಂಹ online desk
ರಾಜ್ಯ

ಮುಸ್ಲಿಮರು ಮಕ್ಕಳನ್ನು ತಾವು ಹುಟ್ಟಿಸಿ ದೇವರು ಕೊಟ್ಟ ಅಂತಾರೇ, ಹಾಗಾದ್ರೆ ದೇವರೇ ನೋಡಿಕೊಳ್ಳಲಿ, ತೆರಿಗೆದಾರರ ಹಣ ಯಾಕೆ ಬೇಕು?: Pratap Simha

ಮುಸ್ಲಿಮರು (Muslims) ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಎಂದು ನಾನು ಹೇಳಿರುವುದು ಪ್ರಚೋದನಕಾರಿನಾ? ಎಂದು ಪ್ರತಾಪ್‌ ಸಿಂಹ (Pratap Simha) ಇದೇ ವೇಳೆ ಪ್ರಶ್ನೆ ಮಾಡಿದ್ದಾರೆ.

ಉದಯಗಿರಿ ಗಲಭೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಕ್ಕಾಗಿ ತಮ್ಮ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಎಫ್ಐಆರ್ ದಾಖಲಾಗಿರುವುದರ ಬಗ್ಗೆ ಮಾಜಿ ಸಂಸದ ಪ್ರತಾಪ್ (Pratap Simha) ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.

ಗಲಭೆ ನಡೆದ ದಿನ ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆಯೇ ಹೊರತು ಪ್ರಚೋದನೆ ನೀಡಿಲ್ಲ. ಒಬ್ಬ ಮುಲ್ಲಾ ಪ್ರಚೋದನೆ ಮಾಡಿದ್ದರೂ ಯಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮುಸ್ಲಿಮರು (Muslims) ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಎಂದು ನಾನು ಹೇಳಿರುವುದು ಪ್ರಚೋದನಕಾರಿನಾ? ಎಂದು ಪ್ರತಾಪ್‌ ಸಿಂಹ (Pratap Simha) ಇದೇ ವೇಳೆ ಪ್ರಶ್ನೆ ಮಾಡಿದ್ದಾರೆ.

ಪುಂಡ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪೊಲೀಸರ ಮೇಲೆ ಆಕ್ರಮಣ ಮಾಡಿದ್ದರು. ಈ ಘಟನೆ ಬೆನ್ನಲ್ಲೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದು ಪ್ರಚೋದನಕಾರಿಯಾ? ಸಿದ್ದರಾಮಯ್ಯ ಸರ್ಕಾರ ಬಂದ ನಂತರ ನನ್ನ ಮೇಲೆ ಹಲವು ಎಫ್‌ಐಆರ್‌ (FIR) ದಾಖಲಿಸಿದ್ದಾರೆ. ಆತ್ಮಸ್ಥೈರ್ಯ ಕುಗ್ಗಿಸಬೇಕು, ಮನೆಯಿಂದ ಹೊರಬಾರದೆಂಬ ಉದ್ದೇಶದಿಂದ ಈ ರೀತಿ ಸಾಲು ಸಾಲು ಎಫ್‌ಐಆರ್‌ ಹಾಕಿಸಿದ್ದಾರೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ಮುಸ್ಲಿಮರು ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಅಂದಿದ್ದೇನೆ ಇದು ಪ್ರಚೋದನಕಾರಿನಾ? ಅವರ ಜನಸಂಖ್ಯೆ ನೋಡಿದರೆ ಗೊತ್ತಾಗುವುದಿಲ್ಲವೇ? ನಾನು ಸತ್ಯ ಹೇಳಿದ್ದೇನೆ. ಮುಸ್ಲಿಮ್ ಸಮುದಾಯದ ಸೆಲಬ್ರಿಟಿಗಳಾದ ಶಾರುಖ್‌ ಖಾನ್‌ಗೆ ಮೂರು ಮಕ್ಕಳಿದ್ದಾರೆ. ಸೈಫ್ ಅಲಿ ಖಾನ್‌ಗೆ 4 ಮಕ್ಕಳಿದ್ದಾರೆ, ನಿಮ್ಮ ಸೆಲೆಬ್ರಿಟಿಗಳೇ ಕಂಟ್ರೋಲ್ ಇಲ್ಲದೆ ಮಕ್ಕಳು ಹುಟ್ಟಿಸುತ್ತಿದ್ದಾರೆ. ಜನೋತ್ಪಾದನೆಯಲ್ಲಿ ತೊಡಗಿದ್ದೀರಿ ಎಂದು ಹೇಳಿದ್ದೇನೆ. ಮುಸ್ಲಿಮರು ಮಕ್ಕಳನ್ನ ದೇವರು ಕೊಟ್ಟ ಅಂತ ಹೇಳ್ತೀರಾ.. ನಿಮ್ಮಮಕ್ಕಳನ್ನ ದೇವರೆ ನೋಡಿಕೊಳ್ಳಲಿ.. ಸರ್ಕಾರ ಯಾಕೆ ತೆರಿಗೆದಾರರ ಹಣ ಖರ್ಚು ಮಾಡಿ ಪುಕ್ಕಟೆ ನೋಡಿಕೊಳ್ಳಬೇಕು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಅತಿಹೆಚ್ಚು ತೆರಿಗೆ ಕಟ್ಟುವವರೆಂದರೆ ಹಿಂದೂಗಳು. ಆದರೆ ಸೌಲಭ್ಯ ಮಾತ್ರ ನಿಮಗೆ ಸಿಗುತ್ತಿದೆ. ಸಂಖ್ಯೆ ಹೆಚ್ಚಳ ಮಾಡಿ ತೊಂದರೆ ಕೊಡ್ತಿದ್ದೀರಿ. ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದೀರಿ ಎಂದು ಹೇಳಿದ್ದೇನೆ. ಸ್ವಾತಂತ್ರ‍್ಯ ಬಂದಾಗ ಮುಸ್ಲಿಮರ ಜನಸಂಖ್ಯೆ ಎಷ್ಟಿತ್ತು ಈಗ ಎಷ್ಟಿದೆ? ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗಿದೆ. ಸತ್ಯ ಹೇಳಿರೋದು ಪ್ರಚೋದನೆ ಹೇಗಾಗುತ್ತೆ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ನಿಯಂತ್ರಣದಿಂದ ಮಕ್ಕಳು ಹುಟ್ಟಿಸಿ, ನಿಮ್ಮ ಶಕ್ತಿಗನುಸಾರವಾಗಿ ಅವರಿಗೆ ವಿದ್ಯಾಭ್ಯಾಸ ಕೊಡಿಸಿ ಅಂತ ಕಿವಿ ಮಾತು ಹೇಳಿದ್ದೇನೆ ಎಂದು ಪ್ರತಾಪ್ ಸಿಂಹ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

SCROLL FOR NEXT