ವಿಧಾನಸೌಧ 
ರಾಜ್ಯ

ಬೆಂಗಳೂರು: ಫೆಬ್ರವರಿ 27ರಿಂದ ವಿಧಾನಸೌಧದಲ್ಲಿ ಪುಸ್ತಕ ಮೇಳ!

ಫೆ.27ರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೃಹತ್ ಪುಸ್ತಕ ಮೇಳವನ್ನು ಉಧ್ಘಾಟನೆ ಮಾಡಲಿದ್ದಾರೆ.

ಬೆಂಗಳೂರು: ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ನಾಲ್ಕು ದಿನಗಳ ಕಾಲ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್ ಅವರು, ಪುಸ್ತಕ ಮೇಳ ನಾಲ್ಕು ದಿನಗಳ ಕಾಲ ನಡೆಯಲಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕವಿಗೋಷ್ಠಿಯೂ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಫೆ.27ರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೃಹತ್ ಪುಸ್ತಕ ಮೇಳವನ್ನು ಉಧ್ಘಾಟನೆ ಮಾಡಲಿದ್ದಾರೆ. ಸರ್ಕಾರದ ಹಲವು ಸಚಿವರು ಹಾಗೂ ಪ್ರತಿಷ್ಠಿತ ಸಾಹಿತಿಗಳು ಕೂಡ ಈ ಪುಸ್ತಕ ಮೇಳದಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯವಾಗಿ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ್ ಮತ್ತು ಸಾಹಿತಿ ದಾಮೋದರ್ ಮೌಜು ಭಾಗಿಯಾಗುತ್ತಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅನೇಕ ಬರಹಗಾರರು ತಮ್ಮ-ತಮ್ಮ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಪ್ರತಿಯೊಂದು ಭಾಷಾ ಅಕಾಡೆಮಿಗಳಿಗೆ ಮೀಸಲಾದ ಸ್ಟಾಲ್ ಇರುತ್ತದೆ. ಇದಲ್ಲದೆ, ಮಕ್ಕಳ ಸಾಹಿತ್ಯ, ಸಿನಿಮಾ, ಸಂವಿಧಾನ ಮತ್ತು ಕನ್ನಡ ಸಾಹಿತ್ಯದಂತಹ ವಿಷಯಗಳ ಕುರಿತು ಬರಹಗಾರರು ಮತ್ತು ತಜ್ಞರೊಂದಿಗೆ ಪ್ರತಿದಿನ ಸಂವಾದ ನಡೆಯಲಿದೆ.

ಶಾಲೆಗಳಿಂದ ಬರುವ ಮಕ್ಕಳಿಗೆ ವಿಧಾನಸಭೆ ಸಭಾಂಗಣಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗುವುದು. ಪುಸ್ತಕಗಳನ್ನು ಖರೀದಿಗೆ ಮತ್ತು ಶಾಲೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಲು 2 ಲಕ್ಷ ರೂಪಾಯಿ ಅನುದಾನವನ್ನು ನೀಡುತ್ತಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT