ಡಿ.ಕೆ ಶಿವಕುಮಾರ್ 
ರಾಜ್ಯ

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಿಸುವಂತೆ ಡಿ.ಕೆ ಶಿವಕುಮಾರ್ ಸೂಚನೆ

“ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ.

ಬೆಂಗಳೂರು: ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ. ಆದರೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ.

ಈಗ ಬೇಸಿಗೆ ಆರಂಭವಾಗುತ್ತಿದ್ದು, ಒಂದು ವೇಳೆ ಕೊಳವೆಬಾವಿಗಳು ಬತ್ತಿ ಹೋದರೆ ಆರ್.ಓ. ಘಟಕಗಳಿಗೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿ ಮುಖಾಂತರವೇ ಪೂರೈಸಬೇಕಾಗುತ್ತದೆ. ನೀರು ಸರಬರಾಜು ಮಾಡುವ ಕುರಿತು ಎರಡು ಸಂಸ್ಥೆಗಳ ನಡುವೆ ಯಾವುದೇ ರೀತಿಯ ಸಮನ್ವಯದ ಕೊರತೆ ಉಂಟಾದರೂ ನಾಗರೀಕರಿಗೆ ತೊಂದರೆಯಾಗುತ್ತದೆ. ಆದ ಕಾರಣಕ್ಕೆ ಈ ಅನಾನುಕೂಲತೆ ತಪ್ಪಿಸುವ ದೃಷ್ಟಿಯಿಂದ ಬಿಬಿಎಂಪಿಗೆ ಸೇರಿದ ಎಲ್ಲಾ ಆರ್.ಓ. ಪ್ಲಾಂಟ್ ಗಳನ್ನು ಬೆಂಗಳೂರು ಜಲಮಂಡಳಿಯೇ ನಿರ್ವಹಣೆ ಮಾಡುವುದು ಸೂಕ್ತ” ಎಂದು ಡಿಸಿಎಂ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ಸಂಚಾರ ಕೈಗೊಂಡು ಪರಿಶೀಲಿಸಿದ ವೇಳೆ ಬೆಂಗಳೂರು ನಗರದ ಕೆಲವು ಆರ್.ಓ. ಪ್ಲಾಂಟ್ ಗಳು ಕೆಲಸ ಮಾಡದೇ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT