ಪರಮೇಶ್ವರ್, ಡಿಕೆ ಶಿವಕುಮಾರ್ 
ರಾಜ್ಯ

ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ: ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದ್ದು ಪರಮೇಶ್ವರ್ ಎಂದ ಡಿಕೆಶಿ!

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಎಂದಿರುವ ಗೃಹ ಸಚಿವ ಪರಮೇಶ್ವರ್ ಅವರೇ ಪರಮೇಶ್ವರ ಅವರೇ ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ರೀತಿಯ ಲೇವಡಿ ಮಾಡಿದ್ದಾರೆ.

ನವದೆಹಲಿ: ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಹೊರೆಯಾಗಿವೆ ಎಂಬ ಮಾತುಗಳು ಕಾಂಗ್ರೆಸ್ ಸರ್ಕಾರದ ಸಚಿವರಿಂದಲೇ ಬರುತ್ತಿವೆ.

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಎಂದಿರುವ ಗೃಹ ಸಚಿವ ಪರಮೇಶ್ವರ್ ಅವರೇ ಪರಮೇಶ್ವರ ಅವರೇ ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ರೀತಿಯ ಲೇವಡಿ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತು ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಪರಮೇಶ್ವರ ನೇತೃತ್ವದ ಸಮಿತಿ ಎಂದು ಮಂಗಳವಾರ ಹೇಳಿದರು.

ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು. ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ ಎಂದು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ,’’ ಎಂದು ಶಿವಕುಮಾರ್ ಹೇಳಿದರು. ‘ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗಿವೆ ಎಂಬ ಗೃಹ ಸಚಿವರ ಹೇಳಿಕೆಗೆ ಉಪಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

ಗ್ಯಾರಂಟಿ ಯೋಜನೆಗಳಿಂದ ಹೊರೆ ಆಗುತ್ತಿರುವುದು ನಿಜ. ಅದು ಗೊತ್ತಿದ್ದೇ ನಾವು ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಈ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಎಂದು ಪರಮೇಶ್ವರ್ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT