ಸ್ಯಾಮ್ ಪಿತ್ರೋಡಾ 
ರಾಜ್ಯ

ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರು ಹೊಂದಿಲ್ಲ: ಬೆಂಗಳೂರಿನಲ್ಲಿ ಅಕ್ರಮ ಭೂಸ್ವಾಧೀನ ಆರೋಪ ತಳ್ಳಿಹಾಕಿದ ಸ್ಯಾಮ್ ಪಿತ್ರೋಡಾ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಕೌನ್ಸಿಲರ್ ಆಗಿರುವ ರಮೇಶ್ ಅವರು ಈ ಸಂಬಂಧ ಜಾರಿ ನಿರ್ದೇಶನಾಲಯ ಮತ್ತು ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ 12.35 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂಬ ಬಿಜೆಪಿ ನಾಯಕರೊಬ್ಬರ ಆರೋಪವನ್ನು ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ಬುಧವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಅಲ್ಲದೆ ಭಾರತದಲ್ಲಿ ತಾವು ಯಾವುದೇ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಐದು ಹಿರಿಯ ಸರ್ಕಾರಿ ಅಧಿಕಾರಿಗಳ ಸಹಾಯದಿಂದ ಸ್ಯಾಮ್ ಪಿತ್ರೋಡಾ ಅವರು 150 ಕೋಟಿ ರೂ. ಮೌಲ್ಯದ 12.35 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಎನ್ ಆರ್ ರಮೇಶ್ ಆರೋಪಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಕೌನ್ಸಿಲರ್ ಆಗಿರುವ ರಮೇಶ್ ಅವರು ಈ ಸಂಬಂಧ ಜಾರಿ ನಿರ್ದೇಶನಾಲಯ ಮತ್ತು ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಎಕ್ಸ್‌ನಲ್ಲಿ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಪಿತ್ರೋಡಾ, "ಭಾರತೀಯ ಮಾಧ್ಯಮಗಳಲ್ಲಿ, ದೂರದರ್ಶನ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಇತ್ತೀಚೆಗೆ ಬಂದ ವರದಿಗಳ ಹಿನ್ನೆಲೆಯಲ್ಲಿ, ನಾನು ಈ ಕೆಳಗಿನವುಗಳನ್ನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ: ನಾನು ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ" ಎಂದಿದ್ದಾರೆ.

"ಇದಲ್ಲದೆ, 1980 ರ ದಶಕದ ಮಧ್ಯಭಾಗದಲ್ಲಿ ಪ್ರಧಾನಿ ರಾಜೀವ್ ಗಾಂಧಿ ಅವರೊಂದಿಗೆ ಅಥವಾ 2004 ರಿಂದ 2014 ರವರೆಗೆ ಡಾ. ಮನಮೋಹನ್ ಸಿಂಗ್ ಅವರೊಂದಿಗೆ - ಭಾರತ ಸರ್ಕಾರದೊಂದಿಗೆ ಕೆಲಸ ಮಾಡಿದ ನನ್ನ ಅವಧಿಯಲ್ಲಿ - ನಾನು ಎಂದಿಗೂ ಯಾವುದೇ ಸಂಬಳವನ್ನು ತೆಗೆದುಕೊಂಡಿಲ್ಲ ಅಥವಾ ಪಡೆದಿಲ್ಲ" ಎಂದು ಅಮೆರಿಕದಲ್ಲಿ ವಾಸಿಸುವ ಕಾಂಗ್ರೆಸ್ ನಾಯಕ ತಿರುಗೇಟು ನೀಡಿದ್ದಾರೆ.

"ಇದಲ್ಲದೆ, ನನ್ನ 83 ವರ್ಷಗಳ ಜೀವಿತಾವಧಿಯಲ್ಲಿ - ಭಾರತದಲ್ಲಿ ಅಥವಾ ಬೇರೆ ಯಾವುದೇ ದೇಶದಲ್ಲಿ ನಾನು ಎಂದಿಗೂ ಯಾವುದೇ ಲಂಚವನ್ನು ಪಾವತಿಸಿಲ್ಲ ಅಥವಾ ಸ್ವೀಕರಿಸಿಲ್ಲ ಎಂದು ನಿಸ್ಸಂದಿಗ್ಧವಾಗಿ ಹೇಳಲು ಬಯಸುತ್ತೇನೆ. ಇದು ಸಂಪೂರ್ಣ ಸುಳ್ಳು ಮತ್ತು ಒಪ್ಪಿಕೊಳ್ಳಲಾಗದ ಸತ್ಯ" ಎಂದು ಪಿತ್ರೋಡಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT