ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿವಿ ಮೋಹನ್ (ಎಡಭಾಗದ ಚಿತ್ರ), ಡಿಕೆ ಶಿವಕುಮಾರ್  online desk
ರಾಜ್ಯ

ಸಾವಿರ ಟೀಕೆಗಳು ಬಂದರೂ ನನ್ನ ಧರ್ಮದ ಮೇಲೆ ನಂಬಿಕೆ ಅಚಲ: DK Shivakumar ಖಡಕ್ ಟಾಂಗ್!

ನಾನು ಹೋಗಿದ್ದು ಶಿವನರಾತ್ರಿಗೆ. ಇದು ನನ್ನ ಸ್ವಂತ ನಂಬಿಕೆ ಎಂದು ಹೇಳುವ ಮೂಲಕ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್‌ ಟೀಕೆ, ಎಚ್ಚರಿಕೆಗಳಿಗೆ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಇಶಾ ಫೌಂಡೇಶನ್ ನಲ್ಲಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಕ್ಕಾಗಿ ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾವಿರ ಟೀಕೆಗಳು ಬಂದರೂ, ನನ್ನ ನಂಬಿಕೆ ನನ್ನದು ಎಂದು ಟೀಕಾ ಪ್ರಹಾರ ನಡೆಸಿದವರಿಗೆ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಪುಸ್ತಕ ಮೇಳ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ಹಿಂದೂ ಆಗಿಯೇ ಹುಟ್ಟಿದ್ದೇನೆ ಹಿಂದೂ ಆಗಿ ಸಾಯುತ್ತೇನೆ ಎಂಬ ಹೇಳಿಕೆಯನ್ನು ಸ್ವಾಗತಿಸಿರುವ ಬಿಜೆಪಿಗೂ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಯಾವ ಬಿಜೆಪಿಯ ಸ್ವಾಗತ ಬೇಡ, ಕಾಂಗ್ರೆಸ್ ಅವರು ಸ್ವಾಗತ ಮಾಡುವುದು ಬೇಡ. ಮಾಧ್ಯಮಗಳು ಮಾತನಾಡುವ ಅವಶ್ಯಕತೆ ಇಲ್ಲ. ನನ್ನ ವೈಯಕ್ತಿಕ ನಂಬಿಕೆ ನನ್ನದು ಎಂದು ಹೇಳಿದ್ದಾರೆ.

ನಾನು ಹೋಗಿದ್ದು ಶಿವನರಾತ್ರಿಗೆ. ಇದು ನನ್ನ ಸ್ವಂತ ನಂಬಿಕೆ ಎಂದು ಹೇಳುವ ಮೂಲಕ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್‌ ಟೀಕೆ, ಎಚ್ಚರಿಕೆಗಳಿಗೆ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಯಾವ ಧರ್ಮದಲ್ಲಿ ಹುಟ್ಟಬೇಕು ಎಂದು ಯಾರು ಅರ್ಜಿ ಹಾಕಿಕೊಂಡಿಲ್ಲ. ಅಂಬೇಡ್ಕರ್ ಹಿಂದೂ ಧರ್ಮದಲ್ಲಿ ಹುಟ್ಟಿ ಬೌದ್ದ ಧರ್ಮಕ್ಕೆ ಸೇರಿಕೊಂಡರು. ಅದು ಅವರ ಇಷ್ಟ. ನನ್ನ ನಂಬಿಕೆಗಳ ಬಗ್ಗೆ ಚರ್ಚೆ ಆದರೆ ಚರ್ಚೆ ಆಗುತ್ತನೇ ಇರಲಿ ಎಂದರು.

ಕುಂಭಮೇಳದ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದನ್ನೂ ವಿರೋಧಿಸಿರುವ ಡಿಕೆ ಶಿವಕುಮಾರ್, ಕುಂಭಮೇಳಕ್ಕೂ ರಾಜಕೀಯಕ್ಕೂ ಏನ್ ಸಂಬಂಧ? ನೀರು, ಗಾಳಿಗೆ ಜಾತಿ ಇದೆಯಾ? ಅಲ್ಲೂ 3 ನದಿ ಸೇರುತ್ತದೆ. ಟಿ ನರಸಿಪುರದಲ್ಲೂ 3 ನದಿ ಸೇರುತ್ತದೆ. ಅದು ಕಮ್ಯೂನಲ್ ವಿಷಯ ಅಲ್ಲ.

ಸ್ಪೀಕರ್ ಯುಟಿ ಖಾದರ್ ಸಹ ಕುಂಭಮೇಳೆಕ್ಕೆ ಹೋಗಿದ್ದರು. ಕುಂಭಮೇಳದಲ್ಲಿ ಹೇಗೆ ವ್ಯವಸ್ಥೆ ಅಂತ ನೋಡಿಕೊಂಡು ಬಂದಿದ್ದೇನೆ. ಕಾವೇರಿ ಆರತಿ ಬಗ್ಗೆಯೂ ಮಾತಾಡಿದ್ದೇನೆ. ಅದಕ್ಕೆ ರಾಜಕೀಯ ಬೆಳೆಸಬೇಡಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

SCROLL FOR NEXT