ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿವಿ ಮೋಹನ್ (ಎಡಭಾಗದ ಚಿತ್ರ), ಡಿಕೆ ಶಿವಕುಮಾರ್  online desk
ರಾಜ್ಯ

ಸಾವಿರ ಟೀಕೆಗಳು ಬಂದರೂ ನನ್ನ ಧರ್ಮದ ಮೇಲೆ ನಂಬಿಕೆ ಅಚಲ: DK Shivakumar ಖಡಕ್ ಟಾಂಗ್!

ನಾನು ಹೋಗಿದ್ದು ಶಿವನರಾತ್ರಿಗೆ. ಇದು ನನ್ನ ಸ್ವಂತ ನಂಬಿಕೆ ಎಂದು ಹೇಳುವ ಮೂಲಕ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್‌ ಟೀಕೆ, ಎಚ್ಚರಿಕೆಗಳಿಗೆ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಇಶಾ ಫೌಂಡೇಶನ್ ನಲ್ಲಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಕ್ಕಾಗಿ ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾವಿರ ಟೀಕೆಗಳು ಬಂದರೂ, ನನ್ನ ನಂಬಿಕೆ ನನ್ನದು ಎಂದು ಟೀಕಾ ಪ್ರಹಾರ ನಡೆಸಿದವರಿಗೆ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಪುಸ್ತಕ ಮೇಳ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ಹಿಂದೂ ಆಗಿಯೇ ಹುಟ್ಟಿದ್ದೇನೆ ಹಿಂದೂ ಆಗಿ ಸಾಯುತ್ತೇನೆ ಎಂಬ ಹೇಳಿಕೆಯನ್ನು ಸ್ವಾಗತಿಸಿರುವ ಬಿಜೆಪಿಗೂ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಯಾವ ಬಿಜೆಪಿಯ ಸ್ವಾಗತ ಬೇಡ, ಕಾಂಗ್ರೆಸ್ ಅವರು ಸ್ವಾಗತ ಮಾಡುವುದು ಬೇಡ. ಮಾಧ್ಯಮಗಳು ಮಾತನಾಡುವ ಅವಶ್ಯಕತೆ ಇಲ್ಲ. ನನ್ನ ವೈಯಕ್ತಿಕ ನಂಬಿಕೆ ನನ್ನದು ಎಂದು ಹೇಳಿದ್ದಾರೆ.

ನಾನು ಹೋಗಿದ್ದು ಶಿವನರಾತ್ರಿಗೆ. ಇದು ನನ್ನ ಸ್ವಂತ ನಂಬಿಕೆ ಎಂದು ಹೇಳುವ ಮೂಲಕ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್‌ ಟೀಕೆ, ಎಚ್ಚರಿಕೆಗಳಿಗೆ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಯಾವ ಧರ್ಮದಲ್ಲಿ ಹುಟ್ಟಬೇಕು ಎಂದು ಯಾರು ಅರ್ಜಿ ಹಾಕಿಕೊಂಡಿಲ್ಲ. ಅಂಬೇಡ್ಕರ್ ಹಿಂದೂ ಧರ್ಮದಲ್ಲಿ ಹುಟ್ಟಿ ಬೌದ್ದ ಧರ್ಮಕ್ಕೆ ಸೇರಿಕೊಂಡರು. ಅದು ಅವರ ಇಷ್ಟ. ನನ್ನ ನಂಬಿಕೆಗಳ ಬಗ್ಗೆ ಚರ್ಚೆ ಆದರೆ ಚರ್ಚೆ ಆಗುತ್ತನೇ ಇರಲಿ ಎಂದರು.

ಕುಂಭಮೇಳದ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದನ್ನೂ ವಿರೋಧಿಸಿರುವ ಡಿಕೆ ಶಿವಕುಮಾರ್, ಕುಂಭಮೇಳಕ್ಕೂ ರಾಜಕೀಯಕ್ಕೂ ಏನ್ ಸಂಬಂಧ? ನೀರು, ಗಾಳಿಗೆ ಜಾತಿ ಇದೆಯಾ? ಅಲ್ಲೂ 3 ನದಿ ಸೇರುತ್ತದೆ. ಟಿ ನರಸಿಪುರದಲ್ಲೂ 3 ನದಿ ಸೇರುತ್ತದೆ. ಅದು ಕಮ್ಯೂನಲ್ ವಿಷಯ ಅಲ್ಲ.

ಸ್ಪೀಕರ್ ಯುಟಿ ಖಾದರ್ ಸಹ ಕುಂಭಮೇಳೆಕ್ಕೆ ಹೋಗಿದ್ದರು. ಕುಂಭಮೇಳದಲ್ಲಿ ಹೇಗೆ ವ್ಯವಸ್ಥೆ ಅಂತ ನೋಡಿಕೊಂಡು ಬಂದಿದ್ದೇನೆ. ಕಾವೇರಿ ಆರತಿ ಬಗ್ಗೆಯೂ ಮಾತಾಡಿದ್ದೇನೆ. ಅದಕ್ಕೆ ರಾಜಕೀಯ ಬೆಳೆಸಬೇಡಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT