ಸಂಗ್ರಹ ಚಿತ್ರ 
ರಾಜ್ಯ

Athani: ಶಾಲಾ ಆವರಣದಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದ ನೀರಿನ ಟ್ಯಾಂಕ್‌, ತಪ್ಪಿದ ಭಾರೀ ಅನಾಹುತ

ಅದೃಷ್ಟವಶಾತ್ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಯಾವುದೇ ಗಾಯಗಳು ಅಥವಾ ಸಾವುನೋವುಗಳು ಸಂಭವಿಸಿಲ್ಲ.

ಅಥಣಿ: ಶಾಲಾ ಮಕ್ಕಳ ದಿನ ಬಳಕೆಗಾಗಿ ನಿರ್ಮಿಸಲಾಗಿದ್ದ ನೀರಿನ ಟ್ಯಾಂಕ್'ವೊಂದು ಇದ್ದಕ್ಕಿದ್ದಂತೆ ಕುಸಿತು ಬಿದಿದ್ದು, ಎದುರಾಗಬೇಕಿದ್ದ ಭಾರೀ ಅನಾಹುತವೊಂದು ಕ್ಷಣಾರ್ಧದಲ್ಲಿ ತಪ್ಪಿದಂತಾಗಿದೆ.

ಅಥಣಿ ತಾಲೂಕಿನ ಖಿಳೆಗಾಂವ ಗ್ರಾಮದ ಸರ್ಕಾರಿ ಕನ್ನಡ ಹಾಗೂ ಮರಾಠಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ಎಲ್ಐಸಿ ಸಂಸ್ಥೆಯ ಸಹಾಯಧನದಿಂದ ನಿರ್ಮಿಸಲಾದ ನೀರಿನ ಘಟಕ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಆದರೆ, ಅದೃಷ್ಟವಶಾತ್ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಯಾವುದೇ ಗಾಯಗಳು ಅಥವಾ ಸಾವುನೋವುಗಳು ಸಂಭವಿಸಿಲ್ಲ.

ಬೆಳಿಗ್ಗೆ 11:30ಕ್ಕೆ ಈ ಘಟನೆ ನಡೆದಿದ್ದು, ನೀರಿನ ಟ್ಯಾಂಕ್ ಬಳಿ ವಿದ್ಯಾರ್ಥಿಗಳು ಇಲ್ಲದ ಕಾರಣ ಯಾವುದೆ ಅವಘಡ ಸಂಭವಿಸಿಲ್ಲ.

ಘಟನೆ ಕುರಿತು ಮಾಹಿತಿ ಪಡೆದ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಟ್ಯಾಂಕ್ ಕುಸಿತಕ್ಕೆ ಕಾರಣ ಪತ್ತೆಗೆ ನಿರ್ಮಾಣ ಹಾಗೂ ನಿರ್ವಹಣಾ ಮಾನದಂಡಗಳನ್ನು ಗುರುತಿಸಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏತನ್ಮಧ್ಯೆ, ಶಾಲೆಯ ಸ್ಥಳೀಯ ಅಧಿಕಾರಿಗಳು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪೋಷಕರು ಮತ್ತು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ.

ಪ್ರಾಥಮಿಕ ತನಿಖೆಗಳ ಪ್ರಕಾರ, ಕೆಳದರ್ಜೆಯ ನಿರ್ಮಾಣ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯವು ಘಟನೆಗೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ. ಕಳಪೆ-ಗುಣಮಟ್ಟದ ವಸ್ತುಗಳು ಮತ್ತು ಅಸಮರ್ಪಕ ನಿರ್ವಹಣೆ ಟ್ಯಾಂಕ್ ಅನ್ನು ದುರ್ಬಲಗೊಳಿಸಿರಬಹುದೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT