ಬಿವೈ ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ 
ರಾಜ್ಯ

ಅಪಘಾತ: ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ

ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿದೆ.

ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನು ಅಪಘಾತದಲ್ಲಿ ಅದೃಷ್ಟವಶಾತ್​ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಅವರು ಅಪಘಾತದಿಂದ ಆಗಿದ್ದಾರೆ. ಅಂತೆಯೇ ಅಪಘಾತಕ್ಕೀಡಾದ ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊರ ಜಿಲ್ಲೆಗಳಿಗೆ ತೆರಳುವಾಗ ವಿಜಯೇಂದ್ರ ಅವರು ಇದೇ ಕಾರನ್ನು ಬಳಸುತ್ತಿದ್ದರು. ಆದರೆ, ಅದೃಷ್ಟವಶಾತ್ ಇಂದು ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಲಾರಿ ಚಾಲಕನ ಬಂಧನ

ಸದ್ಯ ಪೊಲೀಸರು ಅಪಘಾತ ಮಾಡಿದ ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಲಾರಿ ಮರದ ಪೀಸ್ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬಯಿಗೆ ತೆರಳುತ್ತಿತ್ತು. ಸದ್ಯ ಪೊಲೀಸರು ಕಾರು ಸೇರಿದಂತೆ ಲಾರಿಯನ್ನು ಸಹ ಗ್ರಾಮಾಂತರ ಠಾಣೆಗೆ ತೆಗೆದುಕೊಂಡು ಹೋಗಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲು ಸಿದ್ದತೆ ನಡೆಸಿದ್ದಾರೆ.

ಸ್ನೇಹಿತನಿಗೆ ಸೇರಿದ ಕಾರು

ಕಡೂರು ತಾಲೂಕಿನ ಬೀರೂರಿನ ಹರೀಶ್ ಅವರಿಗೆ ಸೇರಿದ ಕಾರು ಇದಾಗಿದ್ದು, ಹರೀಶ್ ಬಿವೈ ವಿಜಯೇಂದ್ರ ಅವರ ಆಪ್ತ ಎನ್ನಲಾಗಿದೆ. ಚಿಕ್ಕಮಗಳೂರಿಗೆ ಆಗಮಿಸಿದ್ದ ವಿಜಯೇಂದ್ರ ಅವರನನ್ನು ಮಾತನಾಡಿಸಲು ಸ್ನೇಹಿತ ಹರೀಶ್ ಬಂದಿದ್ದರು. ಮಾತನಾಡಿಸಿ ವಾಪಸ್ ಬೀರೂರಿಗೆ ವಿಜಯೇಂದ್ರ ಕಾರಿನ ಹಿಂದೆ ಹೋಗುವಾಗ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್