ಸಾಂದರ್ಭಿಕ ಚಿತ್ರ  
ರಾಜ್ಯ

ವಸತಿ ಯೋಜನೆಗಳ ಮೇಲಿನ ಶೇಕಡಾ 18 ಜಿಎಸ್‌ಟಿ: ರದ್ದು ಕೋರಿ ಸದ್ಯದಲ್ಲೇ ಪ್ರಧಾನಿಗೆ ರಾಜ್ಯ ಸರ್ಕಾರ ಮನವಿ

ರಾಜ್ಯದಲ್ಲಿ 2,865 ಕೊಳೆಗೇರಿಗಳಿದ್ದು, ಅದರಲ್ಲಿ 635 ಬೆಂಗಳೂರಿನಲ್ಲಿವೆ. ಈ ಕೊಳೆಗೇರಿಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ 3,682 ಕೋಟಿ ರೂಪಾಯಿ ಕೇಳಿ ಪ್ರಸ್ತಾವನೆ ಸಲ್ಲಿಸಿದೆ.

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಕೈಗೊಂಡಿರುವ ವಿವಿಧ ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಈ ಕುರಿತು ವಸತಿ ಸಚಿವ ಜಮೀರ್ ಅಹಮದ್ ಜಯಚಂದ್ರ ಅವರಿಗೆ ಮನವಿ ಸಲ್ಲಿಸಿದ ವಸತಿ ಯೋಜನೆಗಳ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಜಯಚಂದ್ರ, ಶೇ.18ರಷ್ಟು ಜಿಎಸ್‌ಟಿ ಜಾರಿಯಾಗಿರುವುದರಿಂದ ಫಲಾನುಭವಿಗಳು ಮನೆ ನಿರ್ಮಾಣಕ್ಕೆ 1.5 ಲಕ್ಷ ರೂಪಾಯಿಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿದ್ದು, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಹೊರೆಯಾಗಿದೆ ಎಂದರು.

ರಾಜ್ಯದಲ್ಲಿ 2,865 ಕೊಳೆಗೇರಿಗಳಿದ್ದು, ಅದರಲ್ಲಿ 635 ಬೆಂಗಳೂರಿನಲ್ಲಿವೆ. ಈ ಕೊಳೆಗೇರಿಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ 3,682 ಕೋಟಿ ರೂಪಾಯಿ ಕೇಳಿ ಪ್ರಸ್ತಾವನೆ ಸಲ್ಲಿಸಿದೆ. ಈ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮನದಟ್ಟು ಮಾಡಲು ನಿರ್ಧರಿಸಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 45,124 ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಅದರಲ್ಲಿ 8,287 ಮನೆಗಳನ್ನು ಪೂರ್ಣಗೊಳಿಸಿದ್ದೇವೆ, 31,626 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದರು.

ರಸ್ತೆ ಸೌಕರ್ಯ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಸಭೆಯಲ್ಲಿ ಈ ಕುರಿತು ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಈ ಸೌಲಭ್ಯ ಕಲ್ಪಿಸಲು 660 ಕೋಟಿ ರೂಪಾಯಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಈ ಮೊತ್ತವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ 171 ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಜಮೀರ್ ಅಹಮದ್ ಹೇಳಿದರು. ಕೇಂದ್ರ ಸರ್ಕಾರವು 60:40 ಅನುಪಾತದಲ್ಲಿ ಹಣವನ್ನು ಬಿಡುಗಡೆ ಮಾಡಿದರೆ, ನಾವು ಕಾಲೊನಿಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಬಹುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT