ಸಂಗ್ರಹ ಚಿತ್ರ 
ರಾಜ್ಯ

ಬೀದಿ ನಾಯಿ-ಜಾನುವಾರುಗಳು ಆಸ್ಪತ್ರೆ ಆವರಣ ಪ್ರವೇಶಿಸದಂತೆ ಕ್ರಮ ಕೈಗೊಳ್ಳಿ: ಆರೋಗ್ಯ ಇಲಾಖೆ ಸೂಚನೆ

ಆಸ್ಪತ್ರೆಗಳ ಒಳಗೆ ಹಾಗೂ ಆವರಣಗಳನ್ನು ಪ್ರವೇಶಿಸುವ ಬೀದಿ ನಾಯಿಗಳು, ಒಳ ರೋಗಿ, ಹೊರ ರೋಗಿ, ಗರ್ಭಿಣಿಯರು, ತಾಯಿ–ಮಕ್ಕಳಿಗೆ ಅಪಾಯ ಉಂಟುಮಾಡುತ್ತಿರುವುದು ಕೆಲವೆಡೆ ವರದಿಯಾಗುತ್ತಿದೆ.

ಬೆಂಗಳೂರು: ಸರ್ಕಾರಿ ಆಸ್ಪತ್ರೆ ಆವರಣದ ಒಳಗೆ ಹಾಗೂ ಹೊರಗೆ ಬೀದಿ ನಾಯಿಗಳು-ಜಾನುವಾರುಗಳು ಪ್ರವೇಶಿಸದಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ.

ಆಸ್ಪತ್ರೆಗಳ ಒಳಗೆ ಹಾಗೂ ಆವರಣಗಳನ್ನು ಪ್ರವೇಶಿಸುವ ಬೀದಿ ನಾಯಿಗಳು, ಒಳ ರೋಗಿ, ಹೊರ ರೋಗಿ, ಗರ್ಭಿಣಿಯರು, ತಾಯಿ–ಮಕ್ಕಳಿಗೆ ಅಪಾಯ ಉಂಟುಮಾಡುತ್ತಿರುವುದು ಕೆಲವೆಡೆ ವರದಿಯಾಗುತ್ತಿದೆ. ಆರೋಗ್ಯ ಸಂಸ್ಥೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದು, ಆಸ್ಪತ್ರೆಗಳಲ್ಲಿ ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರಿಗೆ ಉಂಟಾಗಬಹುದಾದ ಸಂಭವನೀಯ ಅಪಾಯ ತಡೆಗಟ್ಟಲು ಜಾನುವಾರು ಮತ್ತು ಬೀದಿ ನಾಯಿಗಳಿಗೆ ಪ್ರವೇಶ ನಿರ್ಬಂಧಿಸುವ ಅವಶ್ಯಕತೆಯಿದೆ ಎಂದು ತಿಳಿಸಲಾಗಿದೆ.

ಆಸ್ಪತ್ರೆಗಳಲ್ಲಿ ವೈದ್ಯಕೀಯ ತ್ಯಾಜ್ಯ ಮತ್ತು ಆಹಾರ ಪದಾರ್ಥಗಳ ತ್ಯಾಜ್ಯವನ್ನು ಸೂಕ್ತವಾಗಿ ನಿರ್ವಹಿಸದೆ ಇರುವುದೇ ಬೀದಿ ನಾಯಿಗಳು ಆಸ್ಪತ್ರೆಗಳ ಆವರಣ ಪ್ರವೇಶಿಸುವುದಕ್ಕೆ ಪ್ರಮುಖ ಕಾರಣವಾಗಿದೆ. ಈ ಬಗ್ಗೆ ಆರೋಗ್ಯ ಸಂಸ್ಥೆಗಳ ಆಡಳಿತ ಮುಖ್ಯಸ್ಥರು ಅಗತ್ಯ ಕ್ರಮವಹಿಸದೆ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಎಚ್ಚರಿಸಲಾಗಿದೆ.

ಜಾನುವಾರುಗಳು ಹಾಗೂ ಬೀದಿ ನಾಯಿಗಳು ಪ್ರವೇಶಿಸದಂತೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆಯೂ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT