ಎಂಜಿ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿರುವ ಪೌರಕಾರ್ಮಿಕರು 
ರಾಜ್ಯ

New Year celebrations: ನಗರದಲ್ಲಿ 15 ಮೆಟ್ರಿಕ್​ ಟನ್ ತ್ಯಾಜ್ಯ ಸಂಗ್ರಹ..!

ಬಿಬಿಎಂಪಿ ಪೂರ್ವ ವಲಯದ ಆಯುಕ್ತ ಸ್ನೇಹಲ್ ಆರ್ ಮತ್ತು ಬಿಎಸ್‌ಡಬ್ಲ್ಯುಎಂಎಲ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ ಕಬಾಡೆ ಅವರು ಬುಧವಾರ ಬೆಳಗ್ಗೆ ನಗರದ ರಸ್ತೆಗಳನ್ನು ಪರಿಶೀಲನೆ ನಡೆಸಿದರು.

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ಬಳಿಕ ನಗರದಲ್ಲಿ ಪ್ರಮುಖವಾಗಿ ಎಂ.ಜಿ. ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ 15 ಟನ್‌ ತ್ಯಾಜ್ಯ ಹಾಗೂ ಅನುಪಯುಕ್ತ ವಸ್ತುಗಳು ಸಂಗ್ರಹವಾಗಿದ್ದು, ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಗಿದೆ.

ಬಿಬಿಎಂಪಿ ಪೂರ್ವ ವಲಯದ ಆಯುಕ್ತ ಸ್ನೇಹಲ್ ಆರ್ ಮತ್ತು ಬಿಎಸ್‌ಡಬ್ಲ್ಯುಎಂಎಲ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ ಕಬಾಡೆ ಅವರು ಬುಧವಾರ ಬೆಳಗ್ಗೆ ನಗರದ ರಸ್ತೆಗಳನ್ನು ಪರಿಶೀಲನೆ ನಡೆಸಿದರು.

ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌, ರೆಸಿಡೆನ್ಸಿ ರಸ್ತೆ, ರಿಚ್ಮಂಡ್‌ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ ಬಾ ರಸ್ತೆ‌ಗಳಲ್ಲಿ ಬುಧವಾರ ಮುಂಜಾನೆ 3ರಿಂದ ಬೆಳಿಗ್ಗೆ 7ರವರೆಗೆ ಸ್ವಚ್ಛತಾ ಕಾರ್ಯ ನಡೆಸಲಾಯಿತು. 15 ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಲಾಗಿದೆ ಎಂದು ಬಿಎಸ್‌ಡಬ್ಲ್ಯುಎಂಎಲ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಂತಿನಗರ ಘನತ್ಯಾಜ್ಯ ವಿಭಾಗದಿಂದ ಸ್ವಚ್ಛತಾ ಕಾರ್ಯ ಮಾಡಲಾಗಿದ್ದು, 25 ಆಟೋ ಟಿಪ್ಪರ್‌ಗಳು, ಮೂರು ಕಾಂಪ್ಯಾಕ್ಟರ್‌ಗಳೊಂದಿಗೆ 70ಕ್ಕೂ ಹೆಚ್ಚು ಪೌರಕಾರ್ಮಿಕರು, ಕಿರಿಯ ಆರೋಗ್ಯ ಅಧಿಕಾರಿಗಳು, ಮಾರ್ಷಲ್‌ಗಳು ಕಾರ್ಯನಿರ್ವಹಿಸಿದರು.

ಸಿಬಿಡಿ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿದ್ದ ಪ್ಲಾಸ್ಟಿಕ್ ಚೀಲಗಳು, ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿಗಳು, ಮದ್ಯದ ಬಾಟಲಿಗಳು ಸೇರಿದಂತೆ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಿ ಸಂಗ್ರಹಿಸಲಾಗಿದೆ. ಪುನರ್ ಬಳಕೆಯ ಸುಮಾರು ಮೂರು ಟನ್ ತ್ಯಾಜ್ಯವನ್ನು ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT