ಮೃತಪಟ್ಟಿದ್ದ ನಾಯಿ  
ರಾಜ್ಯ

ಸಾಕುನಾಯಿ ಹಠಾತ್ ಸಾವು: ಮನನೊಂದು ಮಾಲೀಕ ಆತ್ಮಹತ್ಯೆ

ಹೆಗ್ಗಡದೇವನಪುರ ಗ್ರಾಮದ ನಿವಾಸಿ ರಾಜಶೇಖರ್ (33ವ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ತನ್ನ ಸಾಕುನಾಯಿಯ ಹಠಾತ್ ಸಾವಿನಿಂದ ಮನನೊಂದ ನಾಯಿಯ ಮಾಲೀಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ನಡೆದಿದೆ.

ಹೆಗ್ಗಡದೇವನಪುರ ಗ್ರಾಮದ ನಿವಾಸಿ ರಾಜಶೇಖರ್ (33ವ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಬತ್ತು ವರ್ಷಗಳ ಹಿಂದೆ, ರಾಜಶೇಖರ್ ಅವರು ಜರ್ಮನ್ ಶೆಫರ್ಡ್ ನಾಯಿಯನ್ನು ಖರೀದಿಸಿದ್ದರು. ಅದಕ್ಕೆ "ಬೌನ್ಸಿ" ಎಂದು ಹೆಸರಿಟ್ಟಿದ್ದರು. ಅದನ್ನು ಪ್ರೀತಿಯಿಂದ ಪೋಷಿಸುತ್ತಾ ಕುಟುಂಬದ ಸದಸ್ಯರಂತೆ ಪರಿಗಣಿಸಿದ್ದರು. ದುರದೃಷ್ಟವಶಾತ್, ಬೌನ್ಸಿ ಅನಾರೋಗ್ಯದ ಕಾರಣ ಕಳೆದ ಮಂಗಳವಾರ ನಿಧನವಾಯಿತು.

ರಾಜಶೇಖರ್ ತಮ್ಮ ಜಮೀನಿನಲ್ಲಿ ನಾಯಿಯ ಅಂತ್ಯಕ್ರಿಯೆ ನಡೆಸಿ ಮನೆಗೆ ಮರಳಿದ್ದರು. ಮನೆಗೆ ಬಂದ ಮೇಲೆ ತೀವ್ರ ಖಿನ್ನತೆಯಿಂದ ಇದ್ದರು. ಮರುದಿನ ನಾಯಿಯ ಕುತ್ತಿಗೆ ಸರಪಳಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT