ಮೃತಪಟ್ಟಿದ್ದ ನಾಯಿ  
ರಾಜ್ಯ

ಸಾಕುನಾಯಿ ಹಠಾತ್ ಸಾವು: ಮನನೊಂದು ಮಾಲೀಕ ಆತ್ಮಹತ್ಯೆ

ಹೆಗ್ಗಡದೇವನಪುರ ಗ್ರಾಮದ ನಿವಾಸಿ ರಾಜಶೇಖರ್ (33ವ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ತನ್ನ ಸಾಕುನಾಯಿಯ ಹಠಾತ್ ಸಾವಿನಿಂದ ಮನನೊಂದ ನಾಯಿಯ ಮಾಲೀಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ನಡೆದಿದೆ.

ಹೆಗ್ಗಡದೇವನಪುರ ಗ್ರಾಮದ ನಿವಾಸಿ ರಾಜಶೇಖರ್ (33ವ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಬತ್ತು ವರ್ಷಗಳ ಹಿಂದೆ, ರಾಜಶೇಖರ್ ಅವರು ಜರ್ಮನ್ ಶೆಫರ್ಡ್ ನಾಯಿಯನ್ನು ಖರೀದಿಸಿದ್ದರು. ಅದಕ್ಕೆ "ಬೌನ್ಸಿ" ಎಂದು ಹೆಸರಿಟ್ಟಿದ್ದರು. ಅದನ್ನು ಪ್ರೀತಿಯಿಂದ ಪೋಷಿಸುತ್ತಾ ಕುಟುಂಬದ ಸದಸ್ಯರಂತೆ ಪರಿಗಣಿಸಿದ್ದರು. ದುರದೃಷ್ಟವಶಾತ್, ಬೌನ್ಸಿ ಅನಾರೋಗ್ಯದ ಕಾರಣ ಕಳೆದ ಮಂಗಳವಾರ ನಿಧನವಾಯಿತು.

ರಾಜಶೇಖರ್ ತಮ್ಮ ಜಮೀನಿನಲ್ಲಿ ನಾಯಿಯ ಅಂತ್ಯಕ್ರಿಯೆ ನಡೆಸಿ ಮನೆಗೆ ಮರಳಿದ್ದರು. ಮನೆಗೆ ಬಂದ ಮೇಲೆ ತೀವ್ರ ಖಿನ್ನತೆಯಿಂದ ಇದ್ದರು. ಮರುದಿನ ನಾಯಿಯ ಕುತ್ತಿಗೆ ಸರಪಳಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT