ರಸ್ತೆ ಗುಂಡಿ ಮುಚ್ಚುತ್ತಿರುವ ಬಿಬಿಎಂಪಿ 
ರಾಜ್ಯ

ಕಿರಣ್ ಮಜುಂದಾರ್-ಶಾ ಟ್ವೀಟ್ ನಂತರ ಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಿದ ಬಿಬಿಎಂಪಿ!

ಬೇಗೂರು ಮತ್ತು ಅರೆಕೆರೆ ವ್ಯಾಪ್ತಿ ಪ್ರದೇಶವು ಐಟಿ ಕಾರಿಡಾರ್‌ನ ಭಾಗವಾಗಿದ್ದು ಎಲೆಕ್ಟ್ರಾನಿಕ್ಸ್ ಸಿಟಿಗೆ ಸಂಪರ್ಕಿಸುತ್ತದೆ, ಇದು ಹಲವಾರು ವ್ಯಾಪಾರ ಸಂಸ್ಥೆಗಳು ಮತ್ತುಸ್ಟಾರ್ಟ್ ಅಪ್ ಕಂಪನಿಗಳನ್ನು ಹೊಂದಿದೆ.

ಬೆಂಗಳೂರು: ಬೊಮ್ಮನಹಳ್ಳಿ ವಲಯದ ಬೇಗೂರು ಮತ್ತು ಅರೆಕೆರೆ ವ್ಯಾಪ್ತಿಯಲ್ಲಿ ಗುಂಡಿಗಳನ್ನು ಸರಿಪಡಿಸಿರುವ ಬಿಬಿಎಂಪಿಯು ಕಾಮಗಾರಿ ಗುಣಮಟ್ಟ ಪರಿಶೀಲನೆ ನಡೆಸುತ್ತಿದೆ. ಈ ಪ್ರದೇಶವು ಐಟಿ ಕಾರಿಡಾರ್‌ನ ಭಾಗವಾಗಿದ್ದು ಎಲೆಕ್ಟ್ರಾನಿಕ್ಸ್ ಸಿಟಿಗೆ ಸಂಪರ್ಕಿಸುತ್ತದೆ, ಇದು ಹಲವಾರು ವ್ಯಾಪಾರ ಸಂಸ್ಥೆಗಳು ಮತ್ತುಸ್ಟಾರ್ಟ್ ಅಪ್ ಕಂಪನಿಗಳನ್ನು ಹೊಂದಿದೆ.

ಬಿಬಿಎಂಪಿಯ ಬೊಮ್ಮನಹಳ್ಳಿ ವಲಯದ ವ್ಯಾಪ್ತಿಗೆ ಬರುವ ಬೇಗೂರು, ಬೃಂದುವನ ಲೇಔಟ್ ಮತ್ತು ಅರೆಕೆರೆಯ ಮೈಕೋ ಲೇಔಟ್‌ಗೆ ಸಂಪರ್ಕ ಕಲ್ಪಿಸುವ ವಿಟ್ಟಸಂದ್ರ ಮುಖ್ಯರಸ್ತೆಯಲ್ಲಿ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಡಾಂಬರು ಮತ್ತು ಟಾರ್ ಹಾಕುವಿಕೆಯನ್ನು ಪರಿಶೀಲಿಸಿದರು.

ನವೆಂಬರ್‌ನಲ್ಲಿ, ಬಯೋಕಾನ್ ಸಂಸ್ಥಾಪಕ ಕಿರಣ್ ಮಜುಂದಾರ್-ಶಾ ಅವರು ಹದಗೆಟ್ಟ ರಸ್ತೆಯ ಸ್ಥಿತಿಯನ್ನು ಎತ್ತಿ ತೋರಿಸಿದರು. ರಸ್ತೆ ಡಾಂಬರೀಕರಣದ ಕೆಲಸವನ್ನು ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಅಥಾರಿಟಿ (ELCITA) ಗೆ ಹಸ್ತಾಂತರಿಸುವಂತೆ ಬಿಬಿಎಂಪಿಗೆ ಸೂಚಿಸಿದ್ದರು, ಏಕೆಂದರೆ ELCITA ತನ್ನ ಎಲ್ಲಾ ರಸ್ತೆಗಳನ್ನು ಉತ್ತಮವಾಗಿ ನಿರ್ವಹಿಸಿದೆ ಎಂದು ಅವರು ಹೇಳಿದರು.

ಕೆಟ್ಟ ರಸ್ತೆ ಮೂಲಸೌಕರ್ಯದಿಂದ ಬಳಲುತ್ತಿರುವ ಈ ಐಟಿ ಬೆಲ್ಟ್‌ನಲ್ಲಿ ವಾಹನ ಚಾಲಕರು ಮತ್ತು ಕಚೇರಿಗೆ ಹೋಗುವವರ ಸಮಸ್ಯೆ ಬಗ್ಗೆ ವಿವರಿಸಿದ್ದರು. ಇದಾದ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ನಗರ ತಜ್ಞರು ಮತ್ತು ಇತರ ಕಾರ್ಪೊರೇಟ್‌ಗಳನ್ನು ಭೇಟಿಯಾಗಿ ಚರ್ಚಿಸಿ ಉತ್ತಮ ಮೂಲಸೌಕರ್ಯಗಳನ್ನು ನಿರ್ಮಿಸಲು ಸರ್ಕಾರದೊಂದಿಗೆ ಸಹಕರಿಸುವಂತೆ ಸೂಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT