ಒತ್ತುವರಿ ತೆರವು ಕಾರ್ಯಾಚರಣೆ (ಸಂಗ್ರಹ ಚಿತ್ರ) 
ರಾಜ್ಯ

BBMP: ಪೂರ್ವ ವಲಯದಲ್ಲಿ ಕಾರ್ಯಾಚರಣೆ; ಪಾದಚಾರಿ ಮಾರ್ಗ ಒತ್ತುವರಿ, ಫ್ಲೆಕ್ಸ್-ಬ್ಯಾನರ್ ತೆರವು

ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಪಾಲಿಕೆಗೆ ಹಲವರು ದೂರುಗಳನ್ನು ನೀಡಿದ್ದರು.

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ಹಾಗೂ ಪೂರ್ವ ವಲಯದ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಪಾದಚಾರಿ ಮಾರ್ಗಗಳ ಒತ್ತುವರಿ ಹಾಗೂ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಿದೆ.

ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಪಾಲಿಕೆಗೆ ಹಲವರು ದೂರುಗಳನ್ನು ನೀಡಿದ್ದರು.

ದೂರು ಹಿನ್ನೆಲಯೆಲ್ಲಿ ಪೂರ್ವ ವಲಯದ ಸಿ. ವಿ. ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ 109, ಹಳೇ ವಾರ್ಡ್ ಸಂಖ್ಯೆ 50 ರ ಕಸ್ತೂರಿನಗರದ 2ನೇ ಮುಖ್ಯರಸ್ತೆಯಲ್ಲಿ ಪಾದಚಾರಿ ರಸ್ತೆಗಳ ಮೇಲಿದ್ದ ತಳ್ಳುವ ಗಾಡಿಗಳನ್ನು ತೆರವುಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ.

ಇದೇ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ಸಹ ತೆರವುಗೊಳಿಸಲಾಗಿದ್ದು, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಸಹಾಯಕ ಎಂಜಿನಿಯರ್‌ಗಳು, ಆರೋಗ್ಯ ಪರಿವೀಕ್ಷಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಈ ನಡುವೆ ಕಾರ್ಯಾಚರಣೆ ವೇಳೆ ನಿಯಮ ಉಲ್ಲಂಘಿಸಿ ಪಾದಚಾರಿ ಮಾರ್ಗಗಳ ಪದೇ ಪದೇ ಒತ್ತುವರಿ ಮಾಡಿಕೊಳ್ಳುವ, ಸಾರ್ವಜನಿಕರಿಗೆ ತೊಂದರೆಗಳನ್ನು ನೀಡುವ ವ್ಯಾಪಾರಿಗಳ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆಯನ್ನೂ ನೀಡಿದ್ದಾರೆ. ಅದೇ ರೀತಿ ಅಕ್ರಮ ಬ್ಯಾನರ್ ಹಾಕುವವರಿಗೆ ದಂಡ ವಿಧಿಸುವಂತೆ ವಾರ್ಡ್ ಎಂಜಿನಿಯರ್ ಗಳಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT