ಸಂಗ್ರಹ ಚಿತ್ರ 
ರಾಜ್ಯ

New year ಪಾರ್ಟಿ: ಪ್ರಿಯಕರನಿಗೆ ಚೂರಿ ಇರಿದ ಪ್ರೇಯಸಿ, ಸ್ಥಿತಿ ಗಂಭೀರ

ಹಾಸನ ತಾಲೂಕಿನ ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ (24) ಗಾಯಗೊಂಡ ಯುವಕನಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಹಾಸನ: ಮದುವೆಯಾಗಲು ನಿರಾಕರಿಸಿದ ಪ್ರಿಯಕರನಿಗೆ ಪ್ರೇಯಸಿಯೊಬ್ಬಳು ಚೂರಿ ಇರಿದಿರುವ ಘಟನೆ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ ಗೇಟ್‌ನಲ್ಲಿ ಹೊಸ ವರ್ಷದ ಹಿಂದಿನ ದಿನದ ತಡರಾತ್ರಿ ನಡೆದಿದೆ.

ಹಾಸನ ತಾಲೂಕಿನ ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ (24) ಗಾಯಗೊಂಡ ಯುವಕನಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಭವಾನಿ ಎಂಬ ಯುವತಿ ಮನುಕುಮಾರ್ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದಳು. ಈ ವೇಳೆ ಇಬ್ಬರಲ್ಲಿ ಪ್ರೀತಿ ಪ್ರೇಮ ಶುರುವಾಗಿದೆ. ಆದರೆ, ಕೆಲ ದಿನಗಳಿಂದ ಇಬ್ಬರೂ ಬೇರಾಗಿದ್ದರು. ಯಾವ ಕರೆ ಕೂಡ ಮಾಡಿರಲಿಲ್ಲ. ಮಂಗಳವಾರ ರಾತ್ರಿ ಹೊಸ ವರ್ಷಾಚರಣೆಗೆ ಸ್ನೇಹಿತರ ಜೊತೆ ಖಾಸಗಿ ಹೋಟೆಲ್'ಗೆ ಬಂದಿದ್ದ ಮನುಕುಮಾರ್ ವಿಚಾರ ತಿಳಿದ ಯುವತಿ, ಆತನಿಗೆ ಫೋನ್ ಮಾಡಿದ್ದಾಳೆ. ಆದರೆ, ಮನುಕುಮಾರ್ ಫೋನ್ ತೆಗೆದಿಲ್ಲ.

ಬಳಿಕ ತಡರಾತ್ರಿ ಹೋಟೆಲ್ ಬಳಿ ಬಂದ ಭವಾನಿ ಅಲ್ಲೇ ಬಿದ್ದಿ್ದ ಪಾಸ್ ಹಾಕಿಕೊಂಡು ಗೇಟ್ ಒಳಗೆ ಹೋಗಿದ್ದಾಳೆ. ಇದೇ ವೇಳೆ ಮನುಕುಮಾರ್ ಕೂಡ ಗೇಟ್ ಬಳಿ ಬಂದಿದ್ದು, ಈ ವೇಳೆ ಇಬ್ಬರ ನಡುವೆ ಜಗಳವಾಗಿದೆ. ತಕ್ಷಣ ಜಗಳ ಬಿಡಿಸಲು ಸ್ನೇಹಿತರು ಮುಂದಾಗಿದ್ದರು. ನೋಡನೋಡುತ್ತಿದ್ದಂತೆಯೇ ಯುವತಿ ಮನುಕುಮಾರ್'ಗೆ ಚಾರಿಯಿಂದ ಇರಿದಿದ್ದಾಳೆ. ಕೂಡಲೇ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಆತನ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT