ಸಾಂದರ್ಭಿಕ ಚಿತ್ರ  
ರಾಜ್ಯ

ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ!

ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ.

ಗೋಕಾಕ: ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ವಿದ್ಯಾರ್ಥಿಯೊಬ್ಬನಿಗೆ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆ ಗೋಕಾಕ್ ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ನಡೆದಿದೆ.

ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ. ಶಾಲೆ ಮುಗಿದ ಬಳಿಕ ನಗರದ ವಾಲ್ಮೀಕಿ ಮೈದಾನಕ್ಕೆ ಬಂದಿದ್ದ 10ನೇ ತರಗತಿ ವಿದ್ಯಾರ್ಥಿಗಳಾದ ರವಿ ಚಿನ್ನವ್ವ, ಅಶೋಕ್ ಕಂಕಣವಾಡಿ, ಸಿದ್ದಾರ್ಥ ಮಟ್ಟಿಕೊಪ್ಪ ಅವರು ಸಹಪಾಠಿ ಪ್ರದೀಪ್ ಬಂಡಿವಡ್ಡರಗೆ ತರಗತಿಯಲ್ಲಿದ್ದ ಬ್ಯಾಗ್ ತರುವಂತೆ ತಿಳಿಸಿದ್ದಾರೆ.

ಇದಕ್ಕೆ ಪ್ರದೀಪ್ ನಿರಾಕರಿಸಿದ್ದು, ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ಮೂವರು ಪ್ರದೀಪ್ ಕುತ್ತಿಗೆ, ಕೈ ಮತ್ತು ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ನರಳಾಡುತಿದ್ದ ಪ್ರದೀಪ್‌ನನ್ನು ಸ್ಥಳೀಯ ಶಿಕ್ಷಕರು ಗೋಕಾಕ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರ ಪೊಲೀಸರು ಆಸ್ಪತ್ರೆಗೆ ದೌಢಾಯಿಸಿ ಹಲ್ಲೆಗೊಳಗಾದವನಿಂದ ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಇದೀಗ ಬಲೆ ಬೀಸಿದ್ದು, ಈ ಸಂಬಂಧ ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

SCROLL FOR NEXT