ಸಾಂದರ್ಭಿಕ ಚಿತ್ರ  
ರಾಜ್ಯ

ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ!

ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ.

ಗೋಕಾಕ: ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ವಿದ್ಯಾರ್ಥಿಯೊಬ್ಬನಿಗೆ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆ ಗೋಕಾಕ್ ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ನಡೆದಿದೆ.

ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ. ಶಾಲೆ ಮುಗಿದ ಬಳಿಕ ನಗರದ ವಾಲ್ಮೀಕಿ ಮೈದಾನಕ್ಕೆ ಬಂದಿದ್ದ 10ನೇ ತರಗತಿ ವಿದ್ಯಾರ್ಥಿಗಳಾದ ರವಿ ಚಿನ್ನವ್ವ, ಅಶೋಕ್ ಕಂಕಣವಾಡಿ, ಸಿದ್ದಾರ್ಥ ಮಟ್ಟಿಕೊಪ್ಪ ಅವರು ಸಹಪಾಠಿ ಪ್ರದೀಪ್ ಬಂಡಿವಡ್ಡರಗೆ ತರಗತಿಯಲ್ಲಿದ್ದ ಬ್ಯಾಗ್ ತರುವಂತೆ ತಿಳಿಸಿದ್ದಾರೆ.

ಇದಕ್ಕೆ ಪ್ರದೀಪ್ ನಿರಾಕರಿಸಿದ್ದು, ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ಮೂವರು ಪ್ರದೀಪ್ ಕುತ್ತಿಗೆ, ಕೈ ಮತ್ತು ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ನರಳಾಡುತಿದ್ದ ಪ್ರದೀಪ್‌ನನ್ನು ಸ್ಥಳೀಯ ಶಿಕ್ಷಕರು ಗೋಕಾಕ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರ ಪೊಲೀಸರು ಆಸ್ಪತ್ರೆಗೆ ದೌಢಾಯಿಸಿ ಹಲ್ಲೆಗೊಳಗಾದವನಿಂದ ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಇದೀಗ ಬಲೆ ಬೀಸಿದ್ದು, ಈ ಸಂಬಂಧ ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video