ಆಶಾ ಕಾರ್ಯಕರ್ತೆಯರು 
ರಾಜ್ಯ

ವೇತನ, ಪ್ರೋತ್ಸಾಹ ಧನಕ್ಕೆ ಆಗ್ರಹ: ಜನವರಿ 7 ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ

ನಗರ ಪ್ರದೇಶದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ವೆಚ್ಚಗಳಿಗೆ ಅನುಗುಣವಾಗಿ ರೂ.20 ಸಾವಿರ ಗೌರವಧನ ಹೆಚ್ಚಿಸಬೇಕು.

ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ.

ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಳು ಈಡೇರಿಲ್ಲ. ಹಲವು ಸುತ್ತಿನ ಸಭೆಗಳಾದರೂ ನಿರ್ದಿಷ್ಟ ವೇತನ ನೀಡುವ ಭರವಸೆಗೆ ಖಚಿತವಾಗಿ ಉತ್ತರ ನೀಡಿಲ್ಲ. ಹಾಗಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ನಗರ ಪ್ರದೇಶದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ವೆಚ್ಚಗಳಿಗೆ ಅನುಗುಣವಾಗಿ ರೂ.20 ಸಾವಿರ ಗೌರವಧನ ಹೆಚ್ಚಿಸಬೇಕು. 8 ವರ್ಷಗಳಿಂದ ಆಶಾನಿಧಿ ಪೋರ್ಟಲ್‌ನಲ್ಲಿ ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಗಳು ದಾಖಲಾಗದೇ, ಪ್ರೋತ್ಸಾಹಧನವೂ ಬಂದಿಲ್ಲ. ರಾಜ್ಯದಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು.

ಮೊಬೈಲ್ ಆಧಾರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು. ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ ರೂ.5 ಲಕ್ಷ ನೀಡಬೇಕು. ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ನಮ್ಮನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಚ್ಯುಟಿ, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT