ಇಡಿ ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ; 30 ಲಕ್ಷ ರೂ ಹೊತ್ತೊಯ್ದ ಖದೀಮರು!

ತಮ್ಮನ್ನು ತಾವು ಇಡಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದು, ಮನೆಯನ್ನು ಶೋಧಿಸಲು ಆದೇಶವಿದೆ ಎಂದು ಹೇಳಿದ್ದಾರೆ.

ಮಂಗಳೂರು: ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣದ ಉದ್ಯಮಿಯೊಬ್ಬರ ಮನೆಯ ಮೇಲೆ ದಾಳಿ ಮಾಡಿದ ಆರು ಅಪರಿಚಿತ ವ್ಯಕ್ತಿಗಳ ತಂಡ, ಸುಮಾರು 30 ಲಕ್ಷ ರೂಪಾಯಿ ನಗದು ದೋಚಿ, ಐದು ಮೊಬೈಲ್ ಫೋನ್‌ಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜನವರಿ 3ರ ರಾತ್ರಿ ಈ ಘಟನೆ ನಡೆದಿದೆ. ಕೊಳ್ನಾಡು ನಿವಾಸಿ ಹಾಗೂ ಕೃಷಿಕ, ಬೀಡಿ ಉದ್ಯಮಿ ಮೊಹಮ್ಮದ್ ಇಕ್ಬಾಲ್(27) ನೀಡಿದ ದೂರಿನ ಪ್ರಕಾರ ಆರೋಪಿಗಳು ತಮಿಳುನಾಡು ನೋಂದಣಿಯ ವಾಹನದಲ್ಲಿ ರಾತ್ರಿ 8.10ರ ಸುಮಾರಿಗೆ ಅವರ ನಿವಾಸಕ್ಕೆ ಬಂದಿದ್ದಾರೆ.

ತಮ್ಮನ್ನು ತಾವು ಇಡಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದು, ಮನೆಯನ್ನು ಶೋಧಿಸಲು ಆದೇಶವಿದೆ ಎಂದು ಹೇಳಿದ್ದಾರೆ. ಮನೆ ಪ್ರವೇಶಿಸಿದ ನಂತರ, ಅವರು ಶೋಧ ನಡೆಸುವ ಮೊದಲು ಕುಟುಂಬ ಸದಸ್ಯರಿಂದ ಐದು ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡಿದ್ದಾರೆ.

''ತಪಾಸಣೆ ವೇಳೆ, ವ್ಯವಹಾರದ ಉದ್ದೇಶದಿಂದ ಬೀರುದಲ್ಲಿಟ್ಟಿದ್ದ 25-30 ಲಕ್ಷ ರೂ. ನಗದನ್ನು ತೆಗೆದುಕೊಂಡು ಹೋಗಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಮನೆಯಲ್ಲಿ ಇಡಲು ಅನುಮತಿ ಇಲ್ಲ. ಹೀಗಾಗಿ ಬಂಧಿಸುವುದಾಗಿ ಬೆದರಿಕೆ ಹಾಕಿದರು ಎಂದು ಇಕ್ಬಾಲ್ ಹೇಳಿರುವುದಾಗಿ" ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸರಿಸುಮಾರು ರಾತ್ರಿ 10.30ಕ್ಕೆ, ವಶಪಡಿಸಿಕೊಂಡ ನಗದುಗೆ ಸೂಕ್ತ ದಾಖಲೆಗಳನ್ನು ಒದಗಿಸಿ, ಬೆಂಗಳೂರಿನ ಕಚೇರಿಯಿಂದ ಹಣವನ್ನು ಸಂಗ್ರಹಿಸಬಹುದು ಎಂದು ಕುಟುಂಬಕ್ಕೆ ಭರವಸೆ ನೀಡಿ ನಿವಾಸದಿಂದ ತೆರಳಿದರು ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯ ಬಗ್ಗೆ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿದ ನಂತರ, ಇಡಿ ಅಧಿಕಾರಿಗಳಂತೆ ಸೋಗಿನಲ್ಲಿ ಬಂದವರು ವಂಚಕರು ಎಂದು ಅರಿತುಕೊಂಡ ನಂತರ ಇಕ್ಬಾಲ್ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) 2023ರ ಕಲಂ 319(2) ಮತ್ತು 318(4)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದ್ದು, ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT