ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  
ರಾಜ್ಯ

ಬೀದಿ ಬದಿ ವ್ಯಾಪಾರಕ್ಕಾಗಿ ರಸ್ತೆ ಗುರುತಿಸಿ: ಅಧಿಕಾರಿಗಳಿಗೆ BBMP ಸೂಚನೆ

ಮಲ್ಲೇಶ್ವರದಲ್ಲಿರುವ ಪಶ್ಚಿಮ ವಲಯ ಕಚೇರಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆಗೆ’ ಕಾರ್ಯಕ್ರಮದಲ್ಲಿ ಶುಕ್ರವಾರ ನಾಗರಿಕರಿಂದ ಅಹವಾಲು ಸ್ವೀಕರಿಸಿದ ವೇಳೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

ಬೆಂಗಳೂರು: ಪಾಲಿಕೆಯ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಶುಕ್ರವಾರ ಸೂಚನೆ ನೀಡಿದೆ.

ಮಲ್ಲೇಶ್ವರದಲ್ಲಿರುವ ಪಶ್ಚಿಮ ವಲಯ ಕಚೇರಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆಗೆ’ ಕಾರ್ಯಕ್ರಮದಲ್ಲಿ ಶುಕ್ರವಾರ ನಾಗರಿಕರಿಂದ ಅಹವಾಲು ಸ್ವೀಕರಿಸಿದ ವೇಳೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

ಬೀದಿ ಬದಿ ವ್ಯಾಪಾರಿಗಳು, ವ್ಯಾಪಾರ ವಲಯವನ್ನು ಗುರುತಿಸುವವರೆಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಆಯುಕ್ತರು, ಪಶ್ಚಿಮ ವಲಯದಲ್ಲಿ ಈಗಾಗಲೇ ಸುಮಾರು 7,000 ಬೀದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

ಪಾಲಿಕೆ ವತಿಯಿಂದ ವೆಂಡಿಂಗ್ ಜೋನ್‌ಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಇವುಗಳನ್ನು ಗುರುತಿಸುವವರೆಗೆ ಯಾವ ಯಾವ ರಸ್ತೆಗಳಲ್ಲಿ ವಹಿವಾಟು ಮಾಡಬಹುದು ಎಂಬುದನ್ನು ಪರಿಶೀಲಿಸಿ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪಾದಚಾರಿ ಮಾರ್ಗದಲ್ಲಿ ಶಾಶ್ವತ ಪೆಟ್ಟಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರೆ ಅದನ್ನು ಕೂಡಲೇ ತೆರವುಗೊಳಿಸಬೇಕು. ಪಾದಚಾರಿಗಳ ಓಡಾಟಕ್ಕೆ ಅವಕಾಶವಿರಬೇಕು. ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವಂತಿಲ್ಲ. ಇದರ ಜೊತೆಗೆ ಪಾದಚಾರಿ ಮಾರ್ಗದಲ್ಲಿ ಬರುವ ಅಂಗಡಿ/ಮುಂಗಟ್ಟುಗಳ ಮುಂಭಾಗದ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವುದನ್ನು ಪರಿಶೀಲಿಸಿ ತೆರವುಗೊಳಿಸಬೇಕೆಂದು ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT