ನಟ ದರ್ಶನ್  
ರಾಜ್ಯ

ಆಪರೇಷನ್ ಗೆ ನಟ ದರ್ಶನ್ ಒಪ್ಪಿಗೆ: ಸಂಕ್ರಾಂತಿ ವೇಳೆಗೆ ಶಸ್ತ್ರಚಿಕಿತ್ಸೆ?

ಬೆನ್ನುನೋವು ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿದ್ದ ಅವರು ಆಪರೇಷನ್ ಮಾಡಿಸಬೇಕೆ, ಬೇಡವೇ ಎಂಬ ಗೊಂದಲದಲ್ಲಿದ್ದರು. ಈಗ ಆಪರೇಷನ್ ಮಾಡಿಸೋದು ಅನಿವಾರ್ಯ ಆಗಿದೆ.

ಮೈಸೂರು/ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ನಂತರ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ಅವರು ಆಪರೇಷನ್ ಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆನ್ನುನೋವು ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿದ್ದ ಅವರು ಆಪರೇಷನ್ ಮಾಡಿಸಬೇಕೆ, ಬೇಡವೇ ಎಂಬ ಗೊಂದಲದಲ್ಲಿದ್ದರು. ಈಗ ಆಪರೇಷನ್ ಮಾಡಿಸೋದು ಅನಿವಾರ್ಯ ಆಗಿದೆ. ಅವರಿಗೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ, ಬೇರೆ ದಾರಿ ಕಾಣದೆ ಆಪರೇಷನ್​ಗೆ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಕ್ರಾಂತಿ ಹೊತ್ತಿನಲ್ಲಿ ಆಪರೇಷನ್? ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ. ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದರ್ಶನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಅಜಯ್ ಹೆಗಡೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT