ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ಶೀಘ್ರದಲ್ಲೇ ಹಾಲಿನ ದರ ಏರಿಕೆ!

ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು.

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ.

ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆ ಹಾಲಿನ ದರ ಲೀಟರಕ್'ಗೆ ರೂ.8 ರಿಂದ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ನಿರ್ಧಾರ ಯಾವಾಗ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿ, ಶೀಘ್ರದಲ್ಲೇ ತೆಗೆದುಕೊಳ್ಳಲಾಗುತ್ತದೆ. ಏಕೆಂದರೆ ಬಜೆಟ್‌ಗೂ ಮುನ್ನ ರಾಜ್ಯ ಸರ್ಕಾರವು ತನ್ನ ಆದಾಯದ ಬಗ್ಗೆ ಸ್ಪಷ್ಟತೆಯನ್ನು ಹೊಂದಿರಬೇಕಿದೆ ಎಂದರು.

ಇತ್ತೀಚೆಗೆ, ರಾಮನಗರ ಜಿಲ್ಲೆಯ ಮಾಗಡಿಯ ಕೆಲವು ಹೈನುಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಾಲಿನ ಬೆಲೆಯನ್ನು ಲೀಟರ್‌ಗೆ 5 ರೂ. ಹೆಚ್ಚಿಸಬೇಕೆಂದು ಒತ್ತಾಯಿಸಿದ್ದರು.

ಹಾಲಿನ ಬೆಲೆಯನ್ನು ಆಗಸ್ಟ್ 2023 ರಲ್ಲಿ 3 ರೂ. ಹೆಚ್ಚಿಸಲಾಗಿತ್ತು. ನಂತರ ಲೀಟರ್‌ಗೆ 39 ರೂ.ನಿಂದ 42 ರೂ.ಗೆ ಹೆಚ್ಚಿಸಲಾಯಿತು. ಜೂನ್ 2024 ರಲ್ಲಿ, ಮತ್ತೆ 2 ರೂ. ಹೆಚ್ಚಿಸಲಾಯಿತು, ಬಳಿಕ ಹೆಚ್ಚುವರಿಯಾಗಿ 50 ಮಿಲಿ ನೀಡಲಾಯಿತು.

ಒಟ್ಟಾರೆಯಾಗಿ ಬಸ್‌ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಲಿನ ಬೆಲೆ ಏರಿಕೆ ಮಾಡಲು ಮುಂದಾಗಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಹಾಲಿನ ದರ ಏರಿಕೆಯಿಂದ ರೈತರಿಗೆ ಸಹಕಾರಿಯಾದರೆ, ಹಾಲು, ಮೊಸರು ಸೇರಿದಂತೆ ಡೈರಿ ಉತ್ಪನ್ನಗಳನ್ನು ಕೊಂಡುಕೊಳ್ಳುವವರು ಜೇಬು ಮುಟ್ಟಿ ನೋಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಕೆಎಂಎಫ್ ಅಡಿಯಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿದ್ದು, ರಾಜ್ಯದಲ್ಲಿ ಸುಮಾರು 40 ಲಕ್ಷ ಡೈರಿ ರೈತರಿದ್ದಾರೆ. ದಿನಕ್ಕೆ ಸರಾಸರಿ ಒಂದು ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಇದು ಹೈನುಗಾರಿಕೆಯಲ್ಲಿ ಕರ್ನಾಟಕವನ್ನು ಅಗ್ರದಲ್ಲಿರುವ ರಾಜ್ಯವನ್ನಾಗಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT