‘ದಕ್ಷಿಣ ಹಾಗೂ ನೈರುತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನದಲ್ಲಿ ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ನಿತ್ಯಾನಂದ ರಾಯ್, ಸಂಸದ ಯದುವೀರ ಒಡೆಯರ್ ಮತ್ತಿತರರು 
ರಾಜ್ಯ

ಮೈಸೂರು: ಸಂಪರ್ಕ ಭಾಷೆಯಾಗಿ ಹಿಂದಿ ಬೆಳೆಸಬೇಕು, ವಿದೇಶಿ ಭಾಷೆ ಬಳಸಬಾರದು- ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗವು ಶನಿವಾರ ಆಯೋಜಿಸಿದ್ದ ‘ದಕ್ಷಿಣ ಹಾಗೂ ನೈರುತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್.

ಮೈಸೂರು: ಭಾರತದ ಎಲ್ಲ ಭಾಷೆಗಳ ಮೇಲೆ ಅಭಿಮಾನ ಇರಿಸಿಕೊಂಡೇ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬೆಳೆಸಬೇಕಿದೆ. ವಿದೇಶಿ ಭಾಷೆಯನ್ನು ಸಂಪರ್ಕ ಭಾಷೆಯಾಗಿ ಬಳಸಬಾರದು ಎಂದು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್ ಪ್ರತಿಪಾದಿಸಿದ್ದಾರೆ.

ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗವು ಶನಿವಾರ ಆಯೋಜಿಸಿದ್ದ ‘ದಕ್ಷಿಣ ಹಾಗೂ ನೈರುತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲರು, ಯಾವುದೇ ವಿದೇಶಿ ಭಾಷೆಯನ್ನು ಕಲಿಯಬಹುದು. ಆದರೆ, ನಮ್ಮ ದೇಶದ ಭಾಷೆಗಳನ್ನು ಪ್ರೀತಿಸಬೇಕು. ದ್ವೇಷಿಸಬಾರದು ಎಂದರು. ‌

ದೇಶದ ಸಂಸ್ಕೃತಿಯ ರಾಯಭಾರಿಯಾಗಿರುವ ಎಲ್ಲ ಭಾಷೆಗಳನ್ನು ಕಲಿಯಲು ಮುಂದಾದಾಗ ಮಾತ್ರವೇ ವೈವಿಧ್ಯತೆಯನ್ನು ಅರಿಯಲು ಸಾಧ್ಯವಾಗುತ್ತದೆ. ಭಾರತೀಯ ಸಮಾಜದ ಅಭಿವ್ಯಕ್ತಿಯೇ ಭಾಷೆಯಾಗಿದೆ’ ಎಂದು ತಿಳಿಸಿದರು.

‘ಸಶಕ್ತ ಪರಂಪರೆ ಹೊಂದಿರುವ ದೇಶದ ಅನೇಕತೆಯಲ್ಲಿಯೇ ಏಕತೆಯಿದೆ. ನಮ್ಮ ಸಂಸ್ಕೃತಿಯು ಇತಿಹಾಸ ಹಾಗೂ ಜ್ಞಾನದ ಆಧಾರದ ಮೇಲೆ ನಿಂತಿದೆ. ಹೀಗಾಗಿಯೇ ಹೆಚ್ಚು ವಿದೇಶಿಗರು ದೇಶದ ಜ್ಞಾನ ಭಂಡಾರ ಅರಿಯಲು ಇಲ್ಲಿಗೆ ಬರುತ್ತಾರೆ. ಜ್ಞಾನಿಗಳಾದ ಭಾರತೀಯರು ಸಮಾಜದ ಅಭಿವೃದ್ಧಿಯ ಕಡೆಗೆ ಯೋಚಿಸಬೇಕು’ ಎಂದು ಸಲಹೆ ನೀಡಿದರು.

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಾತನಾಡಿ, ಹಿಂದಿಯನ್ನು ಸಂವಾದದ ಭಾಷೆಯನ್ನಾಗಿ ಮಾಡಲು ಸಂಕಲ್ಪ ಮಾಡಿದ್ದೇವೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಭಾಷೆಗಳನ್ನು ಮಾತನಾಡುವ ದಕ್ಷಿಣ ಭಾರತದಲ್ಲಿ ಹಿಂದಿ ಸಹ ಒಂದು ಪ್ರಮುಖ ಮಾಧ್ಯಮವಾಗಿದೆ, ಇದು ಜನರಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂವಾದದಲ್ಲಿ ಭಾಗವಹಿಸಲು ಅವಕಾಶವನ್ನು ಕೂಡಾ ನೀಡುತ್ತದೆ. ರಾಷ್ಟ್ರೀಯ ಏಕತೆಯನ್ನು ಬಲಪಡಿಸುವ ಮಾಧ್ಯಮವೂ ಆಗಿದೆ ಎಂದು ಹೇಳಿದರು.

ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಪಾಂಡಿಚೇರಿ, ಲಕ್ಷದ್ವೀಪದ ಕೇಂದ್ರ ಸರ್ಕಾರದ ಕಚೇರಿಗಳು, ಬ್ಯಾಂಕ್‌ಗಳಲ್ಲಿ ಭಾಷಾ ಅನುಷ್ಠಾನಗೊಳಿಸಿದ 32 ಉತ್ತಮ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿ, ಪ್ರಮಾಣ ಪತ್ರ ನೀಡಲಾಯಿತು.

ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತಿತರರು ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT