ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: BBMP ಕಸದ ಲಾರಿ ಹರಿದು ಇಬ್ಬರ ಸಹೋದರಿಯರ ದುರ್ಮರಣ

ಅಪಘಾತದ ಬೆನ್ನಲ್ಲೇ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದಲ್ಲಿ ಶನಿವಾರ ನಡೆದಿದೆ.

ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್, ನಾಜಿಯಾ ಇರ್ಫಾನ್ ಮೃತ ಸಹೋದರಿಯರು. ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಹೋದರಿಯರು, ಎಡಬದಿಯಿಂದ ಬಿಬಿಎಂಪಿ ಕಸದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿದ್ದಾರೆ. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಸವಾರರ ಮೇಲೆ ಹರಿದು ಹೋಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಬೆನ್ನಲ್ಲೇ ಹೆಣ್ಣೂರು ಸಂಚಾರಿ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

SCROLL FOR NEXT