ಜೆಡಿಎಸ್ ಮುಖಂಡ ಎನ್.ವೆಂಕಟೇಶ್  
ರಾಜ್ಯ

JDS ಮುಖಂಡನ ಬರ್ಬರ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಲೋಕಸಭಾ ಚುನಾವಣೆಯಲ್ಲಿ ಅರವಿಂದ್ ಎಂಬವರಿಗೆ ಹಣ ನೀಡಲಿಲ್ಲ ಎಂದು ಬಾರ್ ಒಂದರಲ್ಲಿ ಮೃತ ವೆಂಕಟೇಶ್ ಹಾಗೂ ಧನರಾದ್ ನಡುವೆ ಗಲಾಟೆ ನಡೆದಿತ್ತು.

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಎಂದು ಗುರುತಿಸಲಾಗಿದೆ. ಹಳೆ ದ್ವೇಷ ಹಿನ್ನಲೆ ಹತ್ಯೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಅರವಿಂದ್ ಎಂಬವರಿಗೆ ಹಣ ನೀಡಲಿಲ್ಲ ಎಂದು ಬಾರ್ ಒಂದರಲ್ಲಿ ಮೃತ ವೆಂಕಟೇಶ್ ಹಾಗೂ ಧನರಾದ್ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಧನುಗೆ ವೆಂಕಟೇಶ್ ಹಿಗ್ಗಾ ಮುಗ್ಗಾ ಹೊಡೆದಿದ್ದ ಎನ್ನಲಾಗಿದೆ.

ನಂತರ ಧನು ಪರವಾಗಿ ರಾಜೀ ಮಾಡಲು ಮುಂದಾಗಿದ್ದ ಸತೀಶ್‍ಗೂ ವೆಂಕಟೇಶ್ ಹೊಡೆದು ಕಳಿಸಿದ್ದು, ಇದಾದ ಬಳಿಕ ಧನು, ಸತೀಶ್ ಎಲ್ಲಿ ಸಿಕ್ಕರೂ ವೆಂಕಟೇಶ್ ವಾರ್ನಿಂಗ್ ಕೊಡಲು ಶುರು ಮಾಡಿದ್ದು, ದೂರು ಕೊಟ್ಟರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಆವಾಜ್ ಹಾಕುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಇದೇ ವಿಚಾರಕ್ಕೆ ವೆಂಕಟೇಶ್‍ನನ್ನು ಆರೋಪಿಗಳು ಜ.3ರ ರಾತ್ರಿ ಹತ್ಯೆ ಮಾಡಿದ್ದರು ಎಂದು ವರದಿಗಳು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT