ಜೆಡಿಎಸ್ ಮುಖಂಡ ಎನ್.ವೆಂಕಟೇಶ್  
ರಾಜ್ಯ

JDS ಮುಖಂಡನ ಬರ್ಬರ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಲೋಕಸಭಾ ಚುನಾವಣೆಯಲ್ಲಿ ಅರವಿಂದ್ ಎಂಬವರಿಗೆ ಹಣ ನೀಡಲಿಲ್ಲ ಎಂದು ಬಾರ್ ಒಂದರಲ್ಲಿ ಮೃತ ವೆಂಕಟೇಶ್ ಹಾಗೂ ಧನರಾದ್ ನಡುವೆ ಗಲಾಟೆ ನಡೆದಿತ್ತು.

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಎಂದು ಗುರುತಿಸಲಾಗಿದೆ. ಹಳೆ ದ್ವೇಷ ಹಿನ್ನಲೆ ಹತ್ಯೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಅರವಿಂದ್ ಎಂಬವರಿಗೆ ಹಣ ನೀಡಲಿಲ್ಲ ಎಂದು ಬಾರ್ ಒಂದರಲ್ಲಿ ಮೃತ ವೆಂಕಟೇಶ್ ಹಾಗೂ ಧನರಾದ್ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಧನುಗೆ ವೆಂಕಟೇಶ್ ಹಿಗ್ಗಾ ಮುಗ್ಗಾ ಹೊಡೆದಿದ್ದ ಎನ್ನಲಾಗಿದೆ.

ನಂತರ ಧನು ಪರವಾಗಿ ರಾಜೀ ಮಾಡಲು ಮುಂದಾಗಿದ್ದ ಸತೀಶ್‍ಗೂ ವೆಂಕಟೇಶ್ ಹೊಡೆದು ಕಳಿಸಿದ್ದು, ಇದಾದ ಬಳಿಕ ಧನು, ಸತೀಶ್ ಎಲ್ಲಿ ಸಿಕ್ಕರೂ ವೆಂಕಟೇಶ್ ವಾರ್ನಿಂಗ್ ಕೊಡಲು ಶುರು ಮಾಡಿದ್ದು, ದೂರು ಕೊಟ್ಟರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಆವಾಜ್ ಹಾಕುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಇದೇ ವಿಚಾರಕ್ಕೆ ವೆಂಕಟೇಶ್‍ನನ್ನು ಆರೋಪಿಗಳು ಜ.3ರ ರಾತ್ರಿ ಹತ್ಯೆ ಮಾಡಿದ್ದರು ಎಂದು ವರದಿಗಳು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT