ಗಾಯಗೊಂಡ ಮಗುವಿನ್ನು ಮಾತನಾಡಿಸುತ್ತಿರುವ ಶಾಸಕ ಎಸ್‌ಎನ್ ನಾರಾಯಣಸ್ವಾಮಿ. 
ರಾಜ್ಯ

ಕೋಲಾರ: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯ

ಅಂಗನವಾಡಿಯಲ್ಲಿ ಒಟ್ಟು 13 ಮಕ್ಕಳು ಇದ್ದರು. ಘಟನೆ ವೇಳೆ ನಾಲ್ಕು ಮಕ್ಕಳ ತಲೆಗೆ, ಕೈ-ಕಾಲುಗಳಿಗೆ ಗಾಯಗಳಾಗಿದ್ದು, ಕೂಡಲೇ ಮಕ್ಕಳನ್ನು ಬಂಗಾರಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕೋಲಾರ : ಅಂಗನವಾಡಿ ಕಟ್ಟಡದ ಮೇಲ್ಚಾವಣಿಯ ಗಾರೆ ಕುಸಿದು ಬಿದ್ದು ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಬಂಗಾರಪೇಟೆಯ ದಾಸರಹೊಸಹಳ್ಳಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಅಂಗನವಾಡಿಯಲ್ಲಿ ಒಟ್ಟು 13 ಮಕ್ಕಳು ಇದ್ದರು. ಘಟನೆ ವೇಳೆ ನಾಲ್ಕು ಮಕ್ಕಳ ತಲೆಗೆ, ಕೈ-ಕಾಲುಗಳಿಗೆ ಗಾಯಗಳಾಗಿದ್ದು, ಕೂಡಲೇ ಮಕ್ಕಳನ್ನು ಬಂಗಾರಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಗಾಯಗೊಂಡ ಮಕ್ಕಳನ್ನು ಲಿಖಿತ, ಜಾನವಿ, ಲಾಸ್ಯ ಮತ್ತು ಪರಿಣಿತಾ ಎಂದು ಗುರುತಿಸಲಾಗಿದೆ. ಲಿಕಿತಾ ಮತ್ತು ಜಾನವಿ ಎಂಬ ಮಕ್ಕಳಿಗೆ ತಲೆಗೆ ಗಾಯವಾಗಿದ್ದು, ಲಾಸ್ಯ ಮತ್ತು ಪರಿಣಿತಾ ಕಾಲುಗಳ ಮೂಳೆ ಮುರಿತವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಆಸ್ಪತ್ರೆಗೆ ಧಾವಿಸಿ ಮಕ್ಕಳ ಆರೋಗ್ಯ ವಿಚಾರಿಸಿದರು. ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.

ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಅವರು, ಮೇಲ್ಛಾವಣಿಯಲ್ಲಿ ಬಿರುಕು ಉಂಟಾಗಿದ್ದರಿಂದ ಕುಸಿದು ಬಿದ್ದಿದೆ. ಸೋಮವಾರದಿಂದ ವಿದ್ಯಾರ್ಥಿಗಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.

ಮೇಲ್ಚಾವಣಿಯಲ್ಲಿ ನೀರು ನಿಂತಿರುವುದು ಘಟನೆಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಆತಂಕಕ್ಕೊಳಗಾದ ಪೋಷಕರು ಕಟ್ಟಡವನ್ನು ನಿರ್ವಹಿಸದ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?