ಸಾಂದರ್ಭಿಕ ಚಿತ್ರ  
ರಾಜ್ಯ

ಬಸ್ ಪ್ರಯಾಣ ದರ ಏರಿಕೆ: ಪರಿಷ್ಕೃತ ಬೆಲೆ ಮಧ್ಯರಾತ್ರಿಯಿಂದಲೇ ಜಾರಿ

ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ.

ಬೆಂಗಳೂರು: ಹೊಸ ವರ್ಷದ (New Year) ಹೊಸ್ತಿಲಲ್ಲೇ ಬಸ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರದ ಪರಿಷ್ಕೃತ ದರ ಇಂದು ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ.

ಸಾರಿಗೆ ಇಲಾಖೆ ಕೆಎಸ್​ಆರ್​ಟಿಸಿ (KSRTC), ಬಿಎಂಟಿಸಿ (BMTC), ಎನ್​ಡಬ್ಲೂಕೆಆರ್​ಟಿಸಿ (NWKRTC), ಕೆಕೆಆರ್​ಟಿಸಿ (KKRTC) ಬಸ್​ಗಳ ಟಿಕೆಟ್ ದರ ಪರಿಷ್ಕರಣೆಗೊಳಿಸಿದ್ದು, ಶೇ 15 ರಷ್ಟು ದರ ಹೆಚ್ಚು ಮಾಡಿ ಆದೇಶ ಹೊರಡಿಸಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ಬಸ್ ಪ್ರಯಾಣಿಕರಿಗೆ ಹೊಸ ಟಿಕೆಟ್​ ದರದ ಬಿಸಿ ತಟ್ಟಿದೆ.

ಸಾರಿಗೆ ಇಲಾಖೆ ನೂತನ ದರಪಟ್ಟಿ ಬಿಡುಗಟೆ ಮಾಡಿದೆ. 50 ರಿಂದ 100 ರೂಪಾಯಿಯಷ್ಟು ಟಿಕೆಟ್​​ ದರ ಹೆಚ್ಚಳವಾಗಿದೆ.‌ ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ.

ಬಸ್ ದರ ಏರಿಕೆಯ ನಿರ್ಧಾರಕ್ಕೆ ವಿಪಕ್ಷಗಳು, ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಏರಿಕೆ ಮಾಡಿದೆ.

ಶೇ.42ರಷ್ಟು ದರ ಏರಿಕೆ ಪ್ರಸ್ತಾಪ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ಉತ್ತಮ ಬಸ್‌ ಸೇವೆ ನೀಡುವುದು ಸೇರಿ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಳೆದ ಕೆಲ ತಿಂಗಳ ಹಿಂದೆಯೇ ಪ್ರಯಾಣ ದರ ಏರಿಕೆ ಪ್ರಸ್ತಾವ ಸಲ್ಲಿಕೆಯಾಗಿತ್ತು. ಕೆಎಸ್ಸಾರ್ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಶೇ.33ರಷ್ಟು ಹಾಗೂ ಬಿಎಂಟಿಸಿ ಪ್ರಯಾಣ ದರ ಶೇ.42ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಲು ಕೋರಿದ್ದವು. ಆದರೆ, ಅದರಲ್ಲಿ ಶೇ.15ರಷ್ಟು ಬಸ್‌ ಪ್ರಯಾಣ ದರಕ್ಕೆ ಅನುಮತಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ವೇಗದೂತ ಸಾರಿಗೆಗೆ ರಾಜ್ಯದಲ್ಲಿ ಟಿಕೆಟ್‌ ದರ 7 ರೂ.ಗಳಿಂದ 115 ರೂಪಾಯಿ ವರೆಗೆ ಹೆಚ್ಚಳವಾಗಿದೆ. ಬೀದರ್‌ ನಿಂದ ಬೆಂಗಳೂರಿಗೆ ಬರಬೇಕಾದರೆ 115 ರೂಪಾಯಿ ಹೆಚ್ಚಿಗೆ ನೀಡಬೇಕು. ಕಲಬುರಗಿಯಿಂದ ಬೆಂಗಳೂರಿಗೆ ಬರಬೇಕಾದರೆ 99 ರೂಪಾಯಿ ಹೆಚ್ಚು ನೀಡಬೇಕಿದೆ. ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜನರು ಅತ್ಯಂತ ಕನಿಷ್ಠ ಕ್ರಮವಾಗಿ 7 ರೂ. ಹಾಗೂ ಹಾಗೂ 9 ರೂ. ಹೆಚ್ಚಿಗೆ ನೀಡಬೇಕಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT