ಸಂಗ್ರಹ ಚಿತ್ರ 
ರಾಜ್ಯ

ತುಮಕೂರು: ಪೆಂಟಾವಲೆಂಟ್ ಲಸಿಕೆ ಪಡೆದ ಎರಡು ನವಜಾತ ಶಿಶುಗಳ ಸಾವು!

ವಿನೋದ್ ಮತ್ತು ರಂಜಿತಾ ದಂಪತಿಯ ಪುತ್ರಿ ಎರಡು ತಿಂಗಳ ಹೆಣ್ಣು ಮಗುವಿಗೆ ಕೋಟೆಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗಿದ್ದು, ಶುಕ್ರವಾರ ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಕುಣಿಗಲ್ (ತುಮಕೂರು): ನಗರದ ಆರೋಗ್ಯ ಕೇಂದ್ರದಲ್ಲಿ ಗುರುವಾರ ಮತ್ತು ಶುಕ್ರವಾರ ಲಸಿಕೆ (ಪೆಂಟಾವಲೆಂಟ್‌ ವ್ಯಾಕ್ಸಿನ್‌) ಪಡೆದ ಎರಡು ನವಜಾತ ಶಿಶುಗಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ವಿನೋದ್ ಮತ್ತು ರಂಜಿತಾ ದಂಪತಿಯ ಪುತ್ರಿ ಎರಡು ತಿಂಗಳ ಹೆಣ್ಣು ಮಗುವಿಗೆ ಕೋಟೆಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗಿದ್ದು, ಶುಕ್ರವಾರ ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮತ್ತೊಂದು ಪ್ರಕರಣದಲ್ಲಿ, ಭಕ್ತರಹಳ್ಳಿಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಎರಡೂವರೆ ತಿಂಗಳ ಗಂಡು ಮಗು ಕೂಡ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಇದರ ಬೆನ್ನಲ್ಲೇ ರಾಜ್ಯ ನೋಡಲ್ ಅಧಿಕಾರಿ ಡಾ. ಸುಧೀರ್ ನಾಯಕ್, ಜಿಲ್ಲಾ ನೋಡಲ್ ಅಧಿಕಾರಿ ಡಾ. ಮೋಹನ್ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಮರಿಯಪ್ಪ ಸೇರಿದಂತೆ ತಜ್ಞರ ತಂಡ ಶನಿವಾರ ಲಸಿಕೆ ಕೇಂದ್ರಗಳಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ಬಳಿಕ ವಿಶ್ಲೇಷಣೆಗಾಗಿ ಲಸಿಕೆ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ವರದಿಗಳು ಲಭ್ಯವಾದ ನಂತರ ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪೆಂಟಾವಲೆಂಟ್ ಲಸಿಕೆಯನ್ನು ಮಕ್ಕಳನ್ನು ಐದು ಗಂಭೀರ ಕಾಯಿಲೆಗಳಾದ ಡಿಫ್ತೀರಿಯಾ, ಟೆಟನಸ್, ನಾಯಿಕೆಮ್ಮು (ವೂಪಿಂಗ್ ಕೆಮ್ಮು), ಹೆಪಟೈಟಿಸ್ ಬಿ ಮತ್ತು ಹಿಮೋಫಿಲಸ್ ಇನ್ಫ್ಲುಯೆನ್ಸ ಟೈಪ್ ಬಿ ರೋಗಳನ್ನು ತಡೆಗಟ್ಟುವಲ್ಲಿ ನೆರವಾಗಲಿದೆ. ಆದರೆ ಲಸಿಕೆ ಪಡೆದ ಶಿಶುಗಳ ಸಾವಿಗೆ ಕಾರಣ ಏನೆಂಬುದು ತನಿಖೆಯಿಂದ ಬಹಿರಂಗವಾಗಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT