ವಿದ್ಯಾರ್ಥಿನಿ ತೇಜಸ್ವಿನಿ 
ರಾಜ್ಯ

Chamarajanagar: ಹೃದಯಾಘಾತಕ್ಕೆ 3ನೇ ತರಗತಿ ವಿದ್ಯಾರ್ಥಿನಿ ಸಾವು

ಹೃದಯಾಘಾತಕ್ಕೆ ಚಿಕ್ಕ ಮಕ್ಕಳು ಬಲಿಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಇನ್ನು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡ ಪೋಷಕರು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಂತಹವರ ಮನ ಕಲಕುವಂತಿದೆ.

ಚಾಮರಾಜನಗರ: ಚಾಮರಾಜನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಏಕಾಏಕಿ ಕುಸಿದುಬಿದ್ದಿದ್ದಳು. ಕೂಡಲೇ ತೇಜಸ್ವಿನಿಯನ್ನು ಶಾಲಾ ಸಿಬ್ಬಂದಿ ಜೆಎಸ್ಎಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ದುರದೃಷ್ಟವಶಾತ್ ಅದಾಗಲೇ ತೇಜಸ್ವಿನಿ ಮೃತಪಟ್ಟಿದ್ದಳು. ಇನ್ನು ತೇಜಸ್ವಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ವಯಸ್ಕರು ಬಲಿಯಾಗುತ್ತಿದ್ದರು. ಆದರೆ ಇದೀಗ ಹೃದಯಾಘಾತಕ್ಕೆ ಚಿಕ್ಕ ಮಕ್ಕಳು ಬಲಿಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಇನ್ನು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡ ಪೋಷಕರು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಂತಹವರ ಮನ ಕಲಕುವಂತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ