ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕುಡಿದ ಅಮಲಿನಲ್ಲಿ ತಾಯಿ ಕೊಂದು ಮಗ ಆತ್ಮಹತ್ಯೆ

ಶನಿವಾರ ರಾತ್ರಿ ರಮೇಶ್ ಕುಡಿದ ಅಮಲಿನಲ್ಲಿ ಮನೆಗೆ ಬಂದ ನಂತರ ಲಕ್ಷ್ಮಿ ಮತ್ತು ರಮೇಶ್ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ಬೆಂಗಳೂರು: 21 ವರ್ಷದ ಯುವಕನೊಬ್ಬ ಮದ್ಯದ ಅಮಲಿನಲ್ಲಿ ತನ್ನ ತಾಯಿಯನ್ನು ಮೊಬೈಲ್ ಚಾರ್ಜಿಂಗ್ ಕೇಬಲ್‌ನಿಂದ ಕತ್ತು ಹಿಸುಕಿ, ಕೊದು ನಂತರ ಹೊರವಲಯದಲ್ಲಿರುವ ಹಳೆ ಚಂದಾಪುರದ ಅವರ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ಮೃತರನ್ನು ಲಕ್ಷ್ಮೀದೇವಿ (41) ಎಂದು ಗುರುತಿಸಲಾಗಿದ್ದು, ದಿನಗೂಲಿ ಕೆಲಸ ಮಾಡುತ್ತಿದ್ದರು. ಆಕೆಯ ಮಗ ರಮೇಶ್ ಹೋಟೆಲ್ ನಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ. ಲಕ್ಷ್ಮಿ ಅವರು ಪತಿ, ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು, ಲಕ್ಷ್ಮಿ ಪತಿ ಮತ್ತು ಮತ್ತೊಬ್ಬ ಪುತ್ರನನ್ನು ಅಗಲಿದ್ದಾರೆ. ಚಿತ್ರದುರ್ಗ ಮೂಲದ ಕುಟುಂಬ ಸೂರ್ಯ ನಗರದ ಹಳೆ ಚಂದಾಪುರದಲ್ಲಿ ನೆಲೆಸಿತ್ತು.

ಶನಿವಾರ ರಾತ್ರಿ ರಮೇಶ್ ಕುಡಿದ ಅಮಲಿನಲ್ಲಿ ಮನೆಗೆ ಬಂದ ನಂತರ ಲಕ್ಷ್ಮಿ ಮತ್ತು ರಮೇಶ್ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಗಾಗ ಮದ್ಯ ಸೇವಿಸಿ ತಾಯಿಯೊಂದಿಗೆ ಜಗಳವಾಡುತ್ತಿದ್ದ ರಮೇಶ್, ನಿಯಂತ್ರಣ ತಪ್ಪಿ ಸಿಟ್ಟಿನಿಂದ ಮೊಬೈಲ್ ಚಾರ್ಜಿಂಗ್ ಕೇಬಲ್ ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಕೃತ್ಯ ಎಸಗಿದ ಬಳಿಕ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ನಂತರ ಮನೆಗೆ ಭೇಟಿ ನೀಡಿದ ಕುಟುಂಬಸ್ಥರು ರಮೇಶ್ ಮತ್ತು ಲಕ್ಷ್ಮಿ ಇಬ್ಬರೂ ಸಾವನ್ನಪ್ಪಿರುವುನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಚಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT