ಭಾರತೀಯ ರೈಲ್ವೆ 
ರಾಜ್ಯ

ಮಹಾ ಕುಂಭಮೇಳ: ಜನವರಿ 8 ರಂದು ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು

ರೈಲು ನಂ.06577 ಕುಂಭಮೇಳ ಎಕ್ಸ್‌ಪ್ರೆಸ್ ವಿಶೇಷ ರೈಲು ಜನವರಿ 8 ರಂದು SMVT ಬೆಂಗಳೂರಿನಿಂದ 23:50 ಕ್ಕೆ ಹೊರಟು ಜನವರಿ 10 ರಂದು 17:15 ಕ್ಕೆ ಪ್ರಯಾಗರಾಜ್‌ಗೆ ತಲುಪಲಿದೆ.

ಬೆಂಗಳೂರು: ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಜನವರಿ 8 ರಂದು ಬೆಂಗಳೂರು ಮತ್ತು ಪ್ರಯಾಗರಾಜ್ ನಡುವೆ ವಿಶೇಷ ಏಕಮಾರ್ಗ ಕುಂಭಮೇಳ ಎಕ್ಸ್‌ಪ್ರೆಸ್ ರೈಲು ಹೊರಡಲಿದೆ ಎಂದು ನೈಋತ್ಯ ರೈಲ್ವೆ(SWR) ಸೋಮವಾರ ತಿಳಿಸಿದೆ.

ರೈಲು ನಂ.06577 ಕುಂಭಮೇಳ ಎಕ್ಸ್‌ಪ್ರೆಸ್ ವಿಶೇಷ ರೈಲು ಜನವರಿ 8 ರಂದು SMVT ಬೆಂಗಳೂರಿನಿಂದ 23:50 ಕ್ಕೆ ಹೊರಟು ಜನವರಿ 10 ರಂದು 17:15 ಕ್ಕೆ ಪ್ರಯಾಗರಾಜ್‌ಗೆ ತಲುಪಲಿದೆ ಎಂದು SWR ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಏಕಮಾರ್ಗ ವಿಶೇಷ ಎಕ್ಸ್‌ಪ್ರೆಸ್ ರೈಲು ವೈಟ್ ಫೀಲ್ಡ್, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ, ಪೆರಂಬೂರು, ಗುಡೂರು, ವಿಜಯವಾಡ, ವಾರಂಗಲ್, ಬಲ್ಹರ್ಷಾ, ಚಂದ್ರಾಪುರ, ಸೇವಾಗ್ರಾಮ್, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 14 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು, 4 ಸ್ಲೀಪರ್ ಬೋಗಿಗಳು ಮತ್ತು 2 ಲಗೇಜ್ ಕಂ ಬ್ರೇಕ್ ವ್ಯಾನ್‌ಗಳು ಸೇರಿ 20 ಬೋಗಿಗಳನ್ನು ಒಳಗೊಂಡಿರುತ್ತದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT