ಸಿಎಂ ಸಿದ್ದರಾಮಯ್ಯ 
ರಾಜ್ಯ

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು.

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ನಗರದ ಚಾಮರಾಜಪೇಟೆ, ಕಬ್ಬನ್ ಪಾರ್ಕ್, ಹೈಗ್ರೌಂಡ್ಸ್ ಪುಲಿಕೇಶಿನಗರ ಪೊಲೀಸ್ ಠಾಣೆಗಳ ನೂತನ ಕಟ್ಟಡ ಹಾಗೂ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು. ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದು ತಿಳಿಸಿದರು.

ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.

ಪೇದೆಗಳು, ಎಸ್.ಐ ಗಳು, ಇನ್ಸ್‌ಪೆಕ್ಟರ್‌ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT