ರುದ್ರಗೌಡ ಪಾಟೀಲ್  
ರಾಜ್ಯ

FDA ಪರೀಕ್ಷೆ ಅಕ್ರಮ: ಕಿಂಗ್ ಪಿನ್ ಆರ್​ಡಿ ಪಾಟೀಲ್‌ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

2023 ರ ಅಕ್ಟೋಬರ್​​​ 28 ರಂದು ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದರು.

ನವದೆಹಲಿ: ಪ್ರಥಮ ದರ್ಜೆ ಸಹಾಯಕ(FDA) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಪ್ರಕರಣದ ಮುಖ್ಯ ಆರೋಪಿ ಆರ್‌ಡಿ ಪಾಟೀಲ್‌ಗೆ (ರುದ್ರಗೌಡ ಪಾಟೀಲ್) ಸುಪ್ರೀಂಕೋರ್ಟ್ ಗುರುವಾರ ಜಾಮೀನು ನಿರಾಕರಿಸಿದೆ. ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್‌ಡಿ ಪಾಟೀಲ್‌ ಸುಪ್ರೀಂ ಕೋರ್ಟ್ ಮೊರೆಹೋಗಿದ್ದ. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ನಿರಾಕರಿಸಿ ಆದೇಶ ಪ್ರಕಟಿಸಿದೆ.

2023 ರ ಅಕ್ಟೋಬರ್​​​ 28 ರಂದು ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದರು. ಈ ಸಂಬಂಧ ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿತ್ತು. ನಂತರ ಹಲವರ ಬಂಧನವಾಗಿತ್ತು.

ಅಕ್ರಮದ ವಿಚಾರಣೆ ವೇಳೆ, ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಹೆಸರು ಹೊರಬಿದ್ದಿತ್ತು. ಆತನನ್ನು ಬಂಧಿಸಿ ಪ್ರಕರಣದ ತನಿಖೆಯ ಹೊಣೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿತ್ತು.

ಪಿಎಸ್‌ಐ ಪರೀಕ್ಷೆ ಹಗರಣದಲ್ಲಿ ಕೂಡ ಆರ್​​ಡಿ ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ. ಈತ ಕಾಲೇಜು ಆಡಳಿತ ಮಂಡಳಿಗಳ ಜತೆ ಕೈಜೋಡಿಸಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಉತ್ತರಗಳನ್ನು ಬ್ಲೂಟೂಥ್ ಡಿವೈಸ್ ಮೂಲಕ ಕಳುಹಿಸುತ್ತಿದ್ದ ಎಂದು ವಿಚಾರಣೆ ವೇಳೆ ಬಹಿರಂಗವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT