ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಬಂಧನ

ಭಾರತಕ್ಕೆ ಅಕ್ರಮವಾಗಿ ನುಸುಳಿ ಕಟ್ಟಡ ಕಾರ್ಮಿಕನಾಗಿ ನೆಲೆಸಿದ್ದ ಆರೋಪಿ.

ಮಂಗಳೂರು: ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ಮಂಗಳೂರಿನ ಗ್ರಾಮವೊಂದರಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು 25 ವರ್ಷದ ಅನುರುಲ್ ಶೇಕ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಮುಕ್ಕ ಗ್ರಾಮದಲ್ಲಿ ಶೇಕ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಸುಳಿವಿನ ಮೇರೆಗೆ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ಮಂಗಳೂರು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಮೂರು ವರ್ಷಗಳ ಹಿಂದೆ ಲಾಲ್ಗೋಲ್ ಗಡಿ (ಪೂರ್ವ ಪಶ್ಚಿಮ ಬಂಗಾಳ) ಪ್ರದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದನು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯು ಮಂಗಳೂರಿಗೆ ಬಂದು ಕಟ್ಟಡ ಕಾರ್ಮಿಕನಾಗಿ ನೆಲೆಸಿದ್ದ. ಆರಂಭದಲ್ಲಿ ಆತ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ಗೆ ಬಂದು ನಂತರ ಮಂಗಳೂರಿಗೆ ಬಂದು ನೆಲೆಸಿದ್ದ ಎನ್ನಲಾಗಿದೆ.

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ 159 ಬಾಂಗ್ಲಾದೇಶ ಪ್ರಜೆಗಳು ಮತ್ತು 24 ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಾಂಗ್ಲಾದೇಶದಿಂದ 115 ಅಕ್ರಮ ವಲಸಿಗರು ಕರ್ನಾಟಕದಲ್ಲಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಇತ್ತೀಚೆಗೆ ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನ ಪರಿಷತ್ತಿನಲ್ಲಿ ಹೇಳಿಕೆ ನೀಡಿದ್ದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಕ್ರಮ ವಲಸಿಗರ ಪ್ರಕರಣಗಳ ಪತ್ತೆಗೆ ವಿಶೇಷ ಘಟಕವನ್ನು ರಚಿಸಲಾಗಿದೆ. ಭಾರತೀಯ ಭೂಪ್ರದೇಶಕ್ಕೆ ಅಕ್ರಮವಾಗಿ ನುಸುಳುವುದು ಹೊಸ ವಿದ್ಯಮಾನವೇನಲ್ಲ. ಅಕ್ರಮ ವಲಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ದೇಶಕ್ಕೆ ಬರುತ್ತಿದ್ದಾರೆ ಎಂದಿದ್ದರು.

ಇದಕ್ಕೂ ಮೊದಲು, ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು 2024ರ ಡಿಸೆಂಬರ್ 30 ರಂದು ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶಿ ಭಯೋತ್ಪಾದಕ ಜಾಹಿದುಲ್ ಇಸ್ಲಾಂ ಅಕಾ ಕೌಸರ್‌ಗೆ ಶಿಕ್ಷೆ ವಿಧಿಸಿತ್ತು. ಆರೋಪಿಯು ಡಕಾಯಿತಿ, ಪಿತೂರಿ ಮತ್ತು ನಿಧಿ ಸಂಗ್ರಹಣೆ ಮತ್ತು ಮದ್ದುಗುಂಡುಗಳ ಸಂಗ್ರಹದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

ಎನ್‌ಐಎ ತನಿಖೆಯ ಪ್ರಕಾರ, 2005ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರ ವಶದಿಂದ ತಪ್ಪಿಸಿಕೊಂಡು 2014ರಲ್ಲಿ ಪರಾರಿಯಾಗಿದ್ದ ಜೆಎಂಬಿ ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜೊತೆಗೆ ಅಮೀರ್ ಜಹಿದುಲ್ ಇಸ್ಲಾಂ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT