ಪವಿತ್ರಾ ಗೌಡ-ದರ್ಶನ್  
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜರು; ಮುಂದಿನ ವಿಚಾರಣೆ ಫೆಬ್ರವರಿ 25ಕ್ಕೆ ಮುಂದೂಡಿಕೆ

ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ಶುಕ್ರವಾರ ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದಾರೆ. ಜಾಮೀನು ದೊರೆತ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಮೊದಲೇ ಬಂದಿದ್ದ ಪವಿತ್ರಾ ಗೌಡ, ತಮ್ಮ ವಕೀಲರೊಂದಿಗೆ ಕೋರ್ಟ್ ಆವರಣದಲ್ಲಿ ಚರ್ಚಿಸುತ್ತಾ ನಿಂತಿದ್ದರು. ಇತರೆ ಆರೋಪಿಗಳು ಸಹ ತಮ್ಮ ತಮ್ಮ ವಕೀಲರೊಡನೆ ಕೋರ್ಟ್​ಗೆ ಹಾಜರಾಗಿದ್ದರು.

ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಸಹ ಇದ್ದರು. ದರ್ಶನ್, ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು. ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT