ಪವಿತ್ರಾ ಗೌಡ-ದರ್ಶನ್  
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜರು; ಮುಂದಿನ ವಿಚಾರಣೆ ಫೆಬ್ರವರಿ 25ಕ್ಕೆ ಮುಂದೂಡಿಕೆ

ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ಶುಕ್ರವಾರ ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದಾರೆ. ಜಾಮೀನು ದೊರೆತ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಮೊದಲೇ ಬಂದಿದ್ದ ಪವಿತ್ರಾ ಗೌಡ, ತಮ್ಮ ವಕೀಲರೊಂದಿಗೆ ಕೋರ್ಟ್ ಆವರಣದಲ್ಲಿ ಚರ್ಚಿಸುತ್ತಾ ನಿಂತಿದ್ದರು. ಇತರೆ ಆರೋಪಿಗಳು ಸಹ ತಮ್ಮ ತಮ್ಮ ವಕೀಲರೊಡನೆ ಕೋರ್ಟ್​ಗೆ ಹಾಜರಾಗಿದ್ದರು.

ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಸಹ ಇದ್ದರು. ದರ್ಶನ್, ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು. ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT