ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: ಆಸ್ತಿ ವಿವಾದ; ತಂದೆ-ಮಲತಾಯಿಯನ್ನು ಕೊಂದ ಮಗ!

ಆರೋಪಿ ಗಂಗಾಧರಪ್ಪ ತಮ್ಮ ಒಡೆತನದ 2 ಎಕರೆ ಆಸ್ತಿಗಾಗಿ ತಂದೆಯೊಂದಿಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮದ್ಯ ವ್ಯಸನಿಯಾಗಿದ್ದ ಆತ ದಿನನಿತ್ಯ ತನ್ನ ಕುಟುಂಬದೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದ ಘಟನೆ ಧಾರವಾಡ ಜಿಲ್ಲೆಯ ಕುಸುಗಲ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಅಶೋಕಪ್ಪ ಕೊಬ್ಬಣ್ಣನವರ್ ಮತ್ತು ಅವರ ಪತ್ನಿ ಶಾರದಮ್ಮ ಎಂದು ಗುರುತಿಸಲಾಗಿದೆ.

ಆರೋಪಿ ಗಂಗಾಧರಪ್ಪ ತಮ್ಮ ಒಡೆತನದ 2 ಎಕರೆ ಆಸ್ತಿಗಾಗಿ ತಂದೆಯೊಂದಿಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮದ್ಯ ವ್ಯಸನಿಯಾಗಿದ್ದ ಆತ ದಿನನಿತ್ಯ ತನ್ನ ಕುಟುಂಬದೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಶುಕ್ರವಾರ ಮಧ್ಯಾಹ್ನ ಕುಡಿದು ಮನೆಗೆ ಬಂದಿದ್ದು, ಜಗಳ ಆರಂಭಿಸಿದ್ದಾನೆ. ಆತನ ಬೇಡಿಕೆಗೆ ಪೋಷಕರು ಒಪ್ಪದಿದ್ದಾಗ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅಶೋಕಪ್ಪನ ಮೊದಲ ಹೆಂಡತಿ ಶಾಂತಮ್ಮ ಅವರಿಗೆ ಗಂಗಾಧರಪ್ಪ ಹುಟ್ಟಿದ್ದು, ಶಾಂತಮ್ಮ 10 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ತನ್ನ ತಂದೆ ಹಾಗೂ ಮಲತಾಯಿಯನ್ನು ಕೊಂದು ಸ್ಥಳದಿಂದ ಪರಾರಿಯಾಗಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT