ಹೆಗ್ಗವಾಡಿಪುರದಲ್ಲಿ ಖಾಲಿಯಾದ ನಿವಾಸ 
ರಾಜ್ಯ

Chamarajanagar: ಮೈಕ್ರೋಫೈನಾನ್ಸ್ ಕಂಪನಿಗಳ ಹಾವಳಿ; ಕಿರುಕುಳಕ್ಕೆ ಹೆದರಿ ಊರನ್ನೇ ತೊರೆಯುತ್ತಿರುವ ಗ್ರಾಮಸ್ಥರು!

ಗೃಹ ಬಳಕೆಯ ಖರ್ಚು ವೆಚ್ಚಗಳಿಗೆ ಮೈಕ್ರೋಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದಿದ್ದಾರೆ. ಸಾಲದ ಕಂತು ಕಟ್ಟುವುದು ಒಂದು ದಿನ ತಡವಾದರೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡಲು ಆರಂಭಿಸಿದ್ದಾರೆ.

ಮೈಸೂರು: ಚಾಮರಾಜನಗರ ಜಿಲ್ಲೆಯಲ್ಲಿ ಖಾಸಗಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ಮರುಪಾವತಿ ಮಾಡುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ನೂರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಜಾಲಕ್ಕೆ ಸಿಲುಕಿ ಕುಟುಂಬಗಳು ಊರನ್ನೆ ತೊರೆದುಹೋಗಿದ್ದಾರೆ. ಗೃಹ ಬಳಕೆಯ ಖರ್ಚು ವೆಚ್ಚಗಳಿಗೆ ಮೈಕ್ರೋಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದಿದ್ದಾರೆ. ಸಾಲದ ಕಂತು ಕಟ್ಟುವುದು ಒಂದು ದಿನ ತಡವಾದರೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡಲು ಆರಂಭಿಸಿದ್ದಾರೆ. ಹಾಗಾಗಿ ಜನರು ಅವರಿಂದ ತಪ್ಪಿಸಿಕೊಳ್ಳಲು ಊರಿಗೆ ಊರೇ ಖಾಲಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೆಲವು ಸಂದರ್ಭಗಳಲ್ಲಿ, ಏಜೆಂಟರ ಕಿರುಕುಳಕ್ಕೆ ಹೆದರಿ ಮಕ್ಕಳು ತಮ್ಮ ಅಧ್ಯಯನವನ್ನು ನಿಲ್ಲಿಸಿ ನೆರೆಯ ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿನ ತೋಟಗಳಲ್ಲಿ ಕೆಲಸ ಮಾಡಲು ತಮ್ಮ ಪೋಷಕರ ಜೊತೆ ಸೇರಿಕೊಂಡಿದ್ದಾರೆ, ವಿದ್ಯಾರ್ಥಿ ಮೋಹನ್, ತನ್ನ ತಂದೆ ತೆಗೆದುಕೊಂಡ ಸಾಲವನ್ನು ತೀರಿಸಲು ತನ್ನ ಮೂತ್ರಪಿಂಡವನ್ನು ಮಾರಾಟ ಮಾಡಲು ಸರ್ಕಾರಕ್ಕೆ ಮನವಿ ಮಾಡಿದ್ದಾನೆ. ಏಜೆಂಟರು ತಮ್ಮ ಮನೆಗೆ ಭೇಟಿ ನೀಡಿದಾಗಲೆಲ್ಲಾ ತನ್ನ ತಾಯಿಯನ್ನು ಅಸಭ್ಯ ಭಾಷೆಯಲ್ಲಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದರು.

ಏಜೆಂಟರು ರಾತ್ರಿಯಲ್ಲಿ ಸುಸ್ತಿದಾರರ ಮನೆಗಳಿಗೆ ಭೇಟಿ ನೀಡಿ ಅವರ ಮಕ್ಕಳ ಸಮ್ಮುಖದಲ್ಲಿ ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಹೆಗ್ಗವಾಡಿಪುರದ ಜನರು ಮೈಕ್ರೋಫೈನಾನ್ಸ್ ಕಂಪನಿಗಳಿದ ಶೇ. 24 ರಷ್ಟು ಬಡ್ಡಿಗೆ ಸಾಲವನ್ನು ನೀಡಿವೆ. ಕೆಲವು ಕಂಪನಿಗಳನ್ನು ಕೆಲವು ಟ್ರಸ್ಟ್‌ಗಳು ನಡೆಸುತ್ತಿದ್ದವು. ನೆರೆಯ ತಮಿಳುನಾಡಿನ ಕಂಪನಿಗಳು ಸಹ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಕಂಪನಿಗಳು ವ್ಯಕ್ತಿಗಳಿಗೆ ಮಾತ್ರವಲ್ಲದೆ ಮಹಿಳಾ ಸ್ವಸಹಾಯ ಗುಂಪುಗಳಿಗೂ ಸಾಲ ನೀಡುತ್ತವೆ ಎಂದು ಅವರು ಹೇಳಿದರು.

ತಮ್ಮ ಪೋಷಕರು ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಮಾತನಾಡುತ್ತಾರೆ ಎಂದು ಕೆಲವು ಸುಸ್ತಿದಾರರ ಮಕ್ಕಳು ಹೇಳಿದ್ದಾರೆ. ಏತನ್ಮಧ್ಯೆ, ಸುಸ್ತಿದಾರರು ತಮ್ಮ ಗ್ರಾಮಗಳನ್ನು ಬಿಟ್ಟು ಹೋಗದಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮನವಿ ಮಾಡಿದ್ದಾರೆ. ಸುಸ್ತಿದಾರರು ಸಹಾಯಕ್ಕಾಗಿ ತಮ್ಮನ್ನು ಅಥವಾ ಸಹಾಯಕ ಆಯುಕ್ತರನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.

ಅವರು ತಹಶೀಲ್ದಾರ್ ಅಥವಾ ಸ್ಥಳೀಯ ಪಂಚಾಯತ್ ಅಧಿಕಾರಿಗಳನ್ನು ಸಹ ಸಂಪರ್ಕಿಸಬಹುದು. ಗ್ರಾಮಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಜನರಿಗೆ ಶಿಕ್ಷಣ ನೀಡಲು ವಿಶೇಷ ಪಂಚಾಯತ್ ಸಭೆಗಳನ್ನು ನಡೆಸಲು ಜಿಲ್ಲಾಡಳಿತ ಯೋಜಿಸಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT