ಅಣ್ಣಾಮಲೈ 
ರಾಜ್ಯ

ನಕ್ಸಲರ ಶರಣಾಗತಿ, ವಿಕ್ರಮ್ ಗೌಡ ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಣ್ಣಾಮಲೈ

"ಸಾಮಾನ್ಯವಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗುವುದು ಕ್ರಮ. ಆದರೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ನಕ್ಸಲರ ಶರಣಾಗತಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಣ್ಣಾಮಲೈ ಹೇಳಿದರು.

ಉಡುಪಿ: ರಾಜ್ಯದಲ್ಲಿ ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ನೀತಿಯ ಬಗ್ಗೆ ಸಂಶಯ ವ್ಯಕ್ತಪಡಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು, ಅದರ ಪರಿಣಾಮಕಾರಿತ್ವ ಮತ್ತು ಪಾರದರ್ಶಕತೆಯನ್ನು ಶನಿವಾರ ಪ್ರಶ್ನಿಸಿದ್ದಾರೆ.

ಜನವರಿ 2015 ಮತ್ತು ಆಗಸ್ಟ್ 2016 ರ ನಡುವೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆಗಿ ಮತ್ತು ಕರ್ನಾಟಕದ ನಕ್ಸಲರ ಕೇಂದ್ರವೆಂದು ಪರಿಗಣಿಸಲಾದ ಚಿಕ್ಕಮಗಳೂರು ಎಸ್‌ಪಿಯಾಗಿ 2018 ರಲ್ಲಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು.

ರಾಜ್ಯದಲ್ಲಿ ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ನೀತಿ ಜಾರಿಯಲ್ಲಿದೆ. ನಕ್ಸಲರು ತಮ್ಮ ಚಟುವಟಿಕೆಗಳನ್ನು ತೊರೆದು ಮುಖ್ಯವಾಹಿನಿಗೆ ಬರಲು ದಾರಿ ಮಾಡಿಕೊಡುವುದು ಇದರ ಉದ್ದೇಶವಾಗಿದೆ. ಅದರೆ ಇಲ್ಲಿ ಸರ್ಕಾರವು ನಕ್ಸಲರಿಗೆ ಶರಣಾಗತಿ ಪ್ರಕ್ರಿಯೆಯನ್ನು ಸುಲಭ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದರು.

ಶರಣಾಗತಿ ಮತ್ತು ಎನ್‌ಕೌಂಟರ್ ಪ್ರಕರಣಗಳು ವ್ಯಾಪಕ ಊಹಾಪೋಹಗಳಿಗೆ ಕಾರಣವಾಗಿವೆ. ಅನೇಕರು ಈ ಘಟನೆಗಳು ಯಾವ ಸಂದರ್ಭದಲ್ಲಿ ನಡೆದವು ಎಂದು ಪ್ರಶ್ನಿಸುತ್ತಿದ್ದಾರೆ ಎಂದರು.

"ಸಾಮಾನ್ಯವಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗುವುದು ಕ್ರಮ. ಆದರೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ನಕ್ಸಲರ ಶರಣಾಗತಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಣ್ಣಾಮಲೈ ಹೇಳಿದರು.

ನಕ್ಸಲ್ ಮುಖಂಡ ವಿಕ್ರಮ್ ಗೌಡನ ಎನ್‌ಕೌಂಟರ್‌ನಲ್ಲೂ ಅನುಮಾನವಿದೆ. ಎನ್‌ಕೌಂಟರ್ ಆದ ತಕ್ಷಣ ನಕ್ಸಲರು ಶರಣಾದರು ಎಂದು ಸರ್ಕಾರ ಹೇಳುತ್ತಿದೆ. ಆದರೆ ನಕ್ಸಲರು ಶರಣಾಗುವಂತೆ ಯಾರು ಮಾತುಕತೆ ನಡೆಸಿದರು‌ ಎಂಬುದು ಗೊತ್ತಿಲ್ಲ. ನಕ್ಸಲ್ ತಂಡದೊಳಗಡೆ ಇರುವ ಆಂತರಿಕ ರಾಜಕೀಯವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ? ಎಂಬ ಅನುಮಾನ ಮೂಡುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!