ಸಂಗ್ರಹ ಚಿತ್ರ 
ರಾಜ್ಯ

ಇದೆಂತಾ ವಿಕೃತಿ..: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ದುರುಳರು, ರಕ್ತದ ಮಡುವಿನಲ್ಲಿ ಗೋವುಗಳ ನರಳಾಟ

ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸಧ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು: ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.

ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ಡ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸಧ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾಪಿಗಳ ಈ ಕೃತ್ಯಕ್ಕೆ ಸ್ಥಳೀಯರ ಹಿಡಿಶಾಪ ಹಾಕುತ್ತಿದ್ದಾರೆ. ಸ್ಥಳದಲ್ಲಿ ಜನರು ಜಮಾವಣೆಗೊಂಡಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಸ್ಥಳಕ್ಕೆ ಹಿಂದೂ ಕಾರ್ಯಕರ್ತರು ಧಾವಿಸಿದ್ದು, ಕೃತ್ಯವನ್ನು ಖಂಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಆರ್.ಅಶೋಕ್, ಪಿಸಿ ಮೋಹನ್ ಭೇಟಿ: 1 ಲಕ್ಷ ಪರಿಹಾರ ಘೋಷಣೆ

ಇನ್ನು ಘಟನಾ ಸ್ಥಳಕ್ಕೆ ಸಂಸದ ಪಿ ಸಿ ಮೋಹನ್ ಅವರು ಭೇಟಿ ನೀಡಿದ್ದು, ಮಾತುಕತ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ಕೃತ್ಯ. ಗೋವುಗಳನ್ನ ದೇವರು ಎಂದು ಪೂಜೆ ಮಾಡುತ್ತೇವೆ. ಆದರೆ, ಕಿಡಿಗೇಡಿಗಳು ಗೋವುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ ಎಸಗಿದ್ದಾರೆ. ಕೂಡಲೇ ಕಿಡಿಗೇಡಿಗಳ ಬಂಧನವಾಗಬೇಕು. ಈ ಸರ್ಕಾರ ಬಂದ ಮೇಲೆ ಇದೆಲ್ಲಾ ಆಗುತ್ತಿದೆ. ಕಿಡಿಗೇಡಿಗಳ ಬಂಧನವಾಗುವವರೆಗೆ ಹೋರಾಟ ನಿಲುವುದಿಲ್ಲ ಎಂದು ಹೇಳಿದ್ದಾರೆ.

ಪೊಲೀಸರ ಜೊತೆ ಮಾತಾನಾಡಿದ್ದೇನೆ. ಇಲ್ಲಿ ಸಿಸಿಟಿವಿಗಳು ಇಲ್ಲ. ಸಿಸಿಟಿವಿ ಹಾಕಿದರೆ ಕಿತ್ತು ಹಾಕುತ್ತಾರೆ. ಇದೀಗ ನನ್ನ ಎಂಪಿ ಫಂಡ್‌ ನಿಂದ ಸಿಸಿಟಿವಿ ಹಾಕೋಕೆ ವ್ಯವಸ್ಥೆ ಮಾಡುತ್ತೇನೆಂದು ತಿಳಿಸಿದರು.

ಘಟನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ತೀವ್ರವಾಗಿ ಕಿಡಿಕಾರಿದ್ದು, ಹಸುಗಳ ಮಾಲೀಕನಿಗೆ ರೂ.1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ವರದಿ ಬಳಿಕ ಕ್ರಮ

ಈ ನಡುವೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

ಗೃಹ ಸಚಿವ ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಪೊಲೀಸರಿಂದ ವರದಿ ಕೇಳಲಾಗಿದ್ದು, ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಕಲಬುರಗಿ: ಅನ್ನದಾತರ ಸಮಸ್ಯೆ ಮುಂದಿಟ್ಟು,'ಪ್ರಿಯಾಂಕ್ ಖರ್ಗೆ ತವರಿ'ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ; ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಳ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

'ಮದುವೆ ರದ್ದಾಗಿದೆ': ಪಲಾಶ್ ಮುಚ್ಚಲ್ ಜೊತೆಗಿನ ವಿವಾಹದ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ!

SCROLL FOR NEXT