ನವ ಜೋಡಿಗಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಅಂತರ್ಜಾತಿ ವಿವಾಹಗಳಿಂದ ಸಮ ಸಮಾಜ ನಿರ್ಮಾಣ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ

ವಿಜಯನಗರ: ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದರು.

ವಿಜಯನಗರ ಜಿಲ್ಲೆಯ ಬಂಡಿಹಳ್ಳಿಯಲ್ಲಿ ಆಯೋಜಿಸಿದ್ದ "ಸರ್ವಧರ್ಮಗಳ ಸಾಮೂಹಿಕ ವಿವಾಹ" ಸಮಾರಂಭದಲ್ಲಿ ಭಾಗವಹಿಸಿ, ನವಜೋಡಿಗೆ ಶುಭ ಹಾರೈಸಿ, ಮಾತನಾಡಿದ ಮುಖ್ಯಮಂತ್ರಿ, ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವುದಾಗಿ ತಿಳಿಸಿದರು.

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದರು.

ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT