ಒಕ್ಕಲಿಗ ಸಂಘದ ನೂತನ ಪದಾಧಿಕಾರಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ 
ರಾಜ್ಯ

ಜಾತಿ ಗಣತಿ ಸಭೆ ಮುಂದೂಡುವಂತೆ ಒಕ್ಕಲಿಗ ಸಂಘದ ಪದಾಧಿಕಾರಿಗಳಿಗೆ ಡಿಕೆಶಿ ಸೂಚನೆ

ಜಗಳ ಮುಂದುವರಿದರೆ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುತ್ತೇನೆ ಎಂದು ಎಚ್ಚರಿಕೆ ನೀಡಿದ ನಂತರ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಅವರು ಒಪ್ಪಿಗೆ

ಬೆಂಗಳೂರು: ಜಾತಿ ಗಣತಿ ಸಭೆಯನ್ನು ಮುಂದೂಡುವಂತೆ ರಾಜ್ಯದ ಒಕ್ಕಲಿಗ ಸಂಘದ ನೂತನ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಜಗಳ ಬಿಡಿ, ಇಲ್ಲವಾದಲ್ಲಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನೂತನ ಪದಾಧಿಕಾರಿಗಳ ತಂಡ ನನ್ನನ್ನು ಭೇಟಿಯಾಗಲು ಬಂದಿತ್ತು. ರಾಜಿ ಸಂಧಾನ ಮಾಡಿಕೊಂಡ ನಂತರ ಅವರೆಲ್ಲ ಒಗ್ಗಟ್ಟಾಗಿ ಬಂದಿದ್ದರು. ಜಗಳ ಮುಂದುವರಿದರೆ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುತ್ತೇನೆ ಎಂದು ಎಚ್ಚರಿಕೆ ನೀಡಿದ ನಂತರ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಅವರು ಒಪ್ಪಿಕೊಂಡಿರುವುದಾಗಿ ತಿಳಿಸಿದರು.

ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ, ನಾನು ಯಾವುದೇ ಸಭೆ ನಡೆಸಿಲ್ಲ ಅಥವಾ ಅದರ ಅಗತ್ಯವೂ ಇಲ್ಲ. ಜಾತಿ ಗಣತಿ ಕುರಿತು ಸಭೆ ನಡೆಸಲು ಸಂಘದ ಪದಾಧಿಕಾರಿಗಳು ನಿರ್ಧರಿಸಿದ್ದರು. ಇದರಿಂದ ಅನಗತ್ಯ ಗೊಂದಲ ಸೃಷ್ಟಿಯಾಗುತ್ತದೆ ಎಂದು ಸಭೆ ಮುಂದೂಡುವಂತೆ ಹೇಳಿದ್ದೇನೆ ಎಂದರು.

ಈ ಬಗ್ಗೆ ಆದಿಚುಂಚನಗಿರಿ ಮಠದ ನಿರ್ಮಾಣಾನಂದನಾಥ ಸ್ವಾಮಿಯವರೊಂದಿಗೆ ಮಾತನಾಡುವುದಾಗಿಯೂ ಹೇಳಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯ ಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿಯನ್ನು ಫೆಬ್ರವರಿ 29, 2024ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದರು. ಇದು ವಿವಿಧ ಹಿಂದುಳಿದ ವರ್ಗಗಳ ಸಮುದಾಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಕೆಲ ಸಮುದಾಯಗಳು ವರದಿಗೆ ವಿರೋಧ ವ್ಯಕ್ತಪಡಿಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT