ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಹಸುಗಳ ಕೆಚ್ಚಲು ಕೊಯ್ದ ಘಟನೆ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ; ಜಾತಿಗಣತಿ ವರದಿ ಜಾರಿ ಬಗ್ಗೆ ಹೇಳಿದ್ದಿಷ್ಟು...

ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದಲ್ಲಿ ‘ಕಪ್ಪು ಸಂಕ್ರಾಂತಿ’ ಆಚರಿಸುವುದಾಗಿ ಬಿಜೆಪಿ ಘೋಷಣೆ.

ಬೆಂಗಳೂರು: ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಅಪರಿಚಿತರು ಮೂರು ಹಸುಗಳ ಕೆಚ್ಚಲು ಕತ್ತರಿಸಿರುವ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಹಸುಗಳು ಸ್ಥಳೀಯರಾದ ಕರ್ಣ ಎಂಬುವವರಿಗೆ ಸೇರಿವೆ. ಜಾನುವಾರುಗಳ ಘೋರ ಶಬ್ದದಿಂದ ಎಚ್ಚರಗೊಂಡ ನಿವಾಸಿಗಳು, ಹಸುಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ. ಯಾರೇ ಕೃತ್ಯ ಎಸಗಿದ್ದರು ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿಯಲ್ಲಿ ಸಿಎಂ ಸುದ್ದಿಗಾರರಿಗೆ ತಿಳಿಸಿದರು.

ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅವರು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಜಾತಿಗಣತಿ ವರದಿ ಜಾರಿ- ಸಂಪುಟ ಸಭೆಯಲ್ಲಿ ತೀರ್ಮಾನ

ಜಾತಿಗಣತಿ ವರದಿಗಳ ಪರ ಮತ್ತು ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಜಾತಿಗಣತಿ ವರದಿಯನ್ನು ಸಿದ್ಧಪಡಿಸಲಾಗಿದೆ. ಆ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದಲ್ಲಿ ‘ಕಪ್ಪು ಸಂಕ್ರಾಂತಿ’ ಆಚರಿಸುವುದಾಗಿ ಘೋಷಿಸಿದೆ.

'ಈ ಹೇಯ ಕೃತ್ಯವು ಜಿಹಾದಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾದರೆ ನಾವು 'ಕಪ್ಪು ಸಂಕ್ರಾಂತಿ' ಆಚರಿಸುತ್ತೇವೆ. ಈ ಘಟನೆಯ ನಂತರ ನಾವು ಸಂಕ್ರಾಂತಿಯನ್ನು ಹೇಗೆ ಆಚರಿಸಬಹುದು?' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ ಮುಖಂಡರು ಪಕ್ಷದ ಕಾರ್ಯಕರ್ತರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಹಸುಗಳ ಮಾಲೀಕರಿಗೆ ಸಾಂತ್ವನ ಹೇಳಿದ್ದಾರೆ.

ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿಎನ್ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ನಾಯಕರು ಘಟನೆಯನ್ನು ಖಂಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ': AAP ಆರೋಪಗಳನ್ನು ತಳ್ಳಿಹಾಕಿದ ರಾಘವ್ ಚಡ್ಡಾ

Iran war ನಡುವೆಯೂ ಭಾರತ ದೇಶೀಯ ಮತ್ತು ಬಾಹ್ಯ ಸವಾಲುಗಳ ಯಶಸ್ವಿಯಾಗಿ ನಿರ್ವಹಿಸಿದೆ: EAM Jaishankar

ಇರಾನ್, ಅಮೆರಿಕದ ಎರಡು ಬಲಿಷ್ಠ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ್ದು ಹೇಗೆ?, ಇಲ್ಲಿದೆ ಸ್ಫೋಟಕ ವಿಚಾರ!

ನಿತೀಶ್ ಕುಮಾರ್ ಪುತ್ರ ನಿಶಾಂತ್ ಮುಂದಿನ CM; ಪಾಟ್ನಾ ಜೆಡಿಯು ಕಚೇರಿ ಮುಂದೆ ಪೋಸ್ಟರ್‌!

ಮೈತ್ರಿಯಲ್ಲಿ ಬಿರುಕು, ಸಾಲ ವಾಪಸ್ ಕೇಳಿದ UAE; ತಿಂಗಳಾಂತ್ಯಕ್ಕೆ 3.5 ಬಿಲಿಯನ್ ಡಾಲರ್ ಪಾವತಿಸಬೇಕಿದೆ ಪಾಕ್!

SCROLL FOR NEXT