ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ 
ರಾಜ್ಯ

ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧಿಸದಿದ್ದರೆ ಸಚಿವ ಜಮೀರ್ ವಿರುದ್ಧ ಹೋರಾಟ: ಶ್ರೀರಾಮ ಸೇನೆ ಎಚ್ಚರಿಕೆ

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಗಮನಕ್ಕೆ ಬಂದಿದ್ದು. ಇದು ನೀಚ ಕೃತ. ರಾಜ್ಯದಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ಧಾರವಾಡ: ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧಿಸದಿದ್ದರೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಗಮನಕ್ಕೆ ಬಂದಿದ್ದು. ಇದು ನೀಚ ಕೃತ. ರಾಜ್ಯದಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ಜಮೀರ್ ಅಹ್ಮದ್ ಅವರೇ, ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದು ಬರೀ ಪ್ರಾಣಿ ಅಲ್ಲಾ, ಅದು ನಮಗೆ ಅನ್ನ ನೀಡುತ್ತದೆ, ಗೊಬ್ಬರ ಕೊಡುತ್ತದೆ, ಔಷಧಿ ಕೊಡುತ್ತದೆ ಹಾಗೂ ರೈತರ ಬೆನ್ನೆಲುಬು ಕೂಡ ಹೌದು. ಅದರ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ಜಮೀರ್ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ, ಇದು ಎಚ್ಚರಿಕೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇದೆ. ಕಾನೂನು ಇದ್ದರೂ ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ಹಿನ್ನೆಲೆಯಲ್ಲಿ ನಿರಂತರ ಗೋಹತ್ಯೆ ಆಗುತ್ತಿದೆ. ನಿರಂತರ ಕಸಾಯಿ ಖಾನೆಗೆ ಹಸು ಹೋಗುತ್ತಿವೆ. ಅದನ್ನು ತಡೆಯಬೇಕು. ಇಂದು ಸಂಭವಿಸಿರುವ ಘಟನೆ ನೋಡಲು ಆಗುತ್ತಿಲ್ಲ. ಅದು ನಮ್ಮ ತಾಯಿ. ಜಮೀರ್‌ಗೆ ಮಾನಾ ಮರ್ಯಾದೆ ಇದ್ದರೇ ರಾಕ್ಷಸಿ ಕೃತ್ಯ ಮಾಡಿದವರನ್ನು ಒದ್ದು ಒಳಗೆ ಹಾಕಿ. ಇಲ್ಲದಿದ್ದರೇ ಹೋರಾಟಕ್ಕೆ ಸಿದ್ದ ಎಂದು ಸವಾಲು ಹಾಕಿದ್ದಾರೆ.

ಹಸುವಿನ ಕೆಚ್ಚಲು ಕೊಯ್ದಿರುವುದನ್ನು ನೋಡಿದರೆ ಸುಮ್ಮನೆ ಇರಲು ಆಗಲ್ಲ. ಇದನ್ನು ಖಂಡಿಸುತ್ತೇನೆ. ನಿಮ್ಮ ಒಳಗೆ ಇರುವ ಬಾಂಗ್ಲಾದೇಶದವರ ಕುಕೃತ್ಯಕ್ಕೆ ಉತ್ತರ ನೀವೇ ಕೊಡಬೇಕು. ನೀವೇ ಒದ್ದು ಒಳಗೆ ಹಾಕಬೇಕು. ಆ ಕ್ಷೇತ್ರದ ಸಚಿವರು ನೀವು, ಅದು ನಿಮ್ಮ ಜವಾಬ್ದಾರಿ. ಹಿಂದೂ ಜನ ನಿಮಗೆ ವೋಟು ಹಾಕಿದ್ದಾರೆ. ಆ ಹಿಂದೂಗಳಿಗೆ ನ್ಯಾಯ ಒದಗಿಸಬೇಕಾದರೆ ಅವರನ್ನು ಬಂಧಿಸಿ. ನಮ್ಮ ತೇಜಸ್ವಿಗೌಡ ಬೆಳಗ್ಗೆಯಿಂದ ಅಲ್ಲೇ ಇದ್ದಾರೆ. ಪೊಲೀಸರು ಇದನ್ನು ತಡೆಯಬೇಕು ಎಂದು ಹರಿಹಾಯ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

SCROLL FOR NEXT