ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಉದ್ಯಮಿಗೆ 2 ಕೋಟಿ ರೂಪಾಯಿ ವಂಚನೆ; 7 ಮಂದಿ ಬಂಧನ

ಏಳು ಆರೋಪಿಗಳನ್ನು ಬೆಂಗಳೂರು ಮತ್ತು ಮುಂಬೈನಲ್ಲಿ ಬಂಧಿಸಲಾಗಿದೆ, ಆದರೆ, ಗ್ಯಾಂಗ್‌ನ ಇತರ ಐದು ಮಂದಿ ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡುವ ಮೂಲಕ ಹಣವನ್ನು ದ್ವಿಗುಣಗೊಳಿಸಬಹುದು ಎಂದು ಹೇಳಿ ಹೇಳಿಕೊಂಡು 34 ವರ್ಷದ ಉದ್ಯಮಿಯೊಬ್ಬರಿಗೆ 2 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಹಲಸೂರು ಗೇಟ್ ಪೊಲೀಸರು ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಏಳು ಆರೋಪಿಗಳನ್ನು ಬೆಂಗಳೂರು ಮತ್ತು ಮುಂಬೈನಲ್ಲಿ ಬಂಧಿಸಲಾಗಿದೆ, ಆದರೆ ಗ್ಯಾಂಗ್‌ನ ಇತರ ಐದು ಮಂದಿ ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಳು ಮಂದಿಯಲ್ಲಿ ಮೂವರು ಕೇರಳ, ಓರ್ವ ಮುಂಬೈ ಹಾಗೂ ಮೂವರು ಬೆಂಗಳೂರಿನವರಾಗಿದ್ದು, ಮಲೇಷ್ಯಾ ಮೂಲದ ಕಂಪನಿಯ ಪ್ರತಿನಿಧಿಗಳು ಎಂದು ಹೇಳಿ ವಂಚಿಸಿದ್ದಾರೆ.

‘ಮಲೇಷ್ಯಾ OIA: ಅಚಿಥಿ ಇಂಚಿತ್ ಸೆಡಿ ಹ್ಚಿಜ್’ ಎಂಬ ನಕಲಿ ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡುವ ಮೂಲಕ ಒಂದು ದಿನದೊಳಗೆ ಹೂಡಿಕೆಯನ್ನು ದ್ವಿಗುಣಗೊಳಿಸುವುದಾಗಿ ಆರೋಪಿಗಳು ಸಂತ್ರಸ್ತ ವ್ಯಕ್ತಿಯನ್ನು ನಂಬಿಸಿದ್ದರು.

ಬಳಿಕ ಆರ್‌ಟಿಜಿಎಸ್/ಎನ್‌ಇಎಫ್‌ಟಿ ಮೂಲಕ 3.5 ಕೋಟಿ ರೂಪಾಯಿಗಳನ್ನು ಒಂದೇ ದಿನದೊಳಗೆ ಹಿಂದಿರುಗಿಸುವುದಾಗಿ ಭರವಸೆ ನೀಡಿ 2 ಕೋಟಿ ರೂಪಾಯಿ ಹೂಡಿಕೆ ಮಾಡುವಂತೆ ಮನವೊಲಿಸಿದ್ದರು.

ಸಂತ್ರಸ್ತ ವ್ಯಕ್ತಿ ನಾಗರಥಪೇಟೆಯಲ್ಲಿರುವ ಅವರ ಕಚೇರಿಗೆ ಭೇಟಿ ನೀಡಿ 2 ಕೋಟಿ ರೂಪಾಯಿಗಳನ್ನು ಹಸ್ತಾಂತರಿಸಿದ್ದರು. ಇದಕ್ಕೆ ಪ್ರತಿಯಾಗಿ ಆರೋಪಿಗಳು ಸಂತ್ರಸ್ತ ವ್ಯಕ್ತಿಗೆ 9,780 ರೂ.ಗಳನ್ನು ವರ್ಗಾಯಿಸಿ, ಅದು ಮುಂಗಡ ಹಣವಾಗಿದ್ದು, ಉಳಿದ ಹಣವನ್ನು ಶೀಘ್ರದಲ್ಲೇ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದಾಗ ಬಳಿಕ ಆರೋಪಿಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಮೊಬೈಲ್ ಸಂಖ್ಯೆಗಳೂ ಕೂಡ ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ. ಬಳಿಕ ವಂಚನೆಗೊಳಗಾಗಿರುವುದನ್ನು ಮನಗಂಡ ಅವರು, ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT